ಈ.ಡಿ.ದಾಳಿ ವಿಚಾರ: ಯಾವುದಕ್ಕೂ ಹೆದರಲ್ಲ ಎಂದ ಶಾಸಕ ಝಮೀರ್ ಅಹ್ಮದ್ ಖಾನ್

Update: 2021-08-20 15:26 GMT

ಬೆಂಗಳೂರು: 'ದೇಶದ ಎಲ್ಲ ರಾಜ್ಯಗಳಲ್ಲಿ ಪ್ರಬಲವಾಗಿರುವ ಮುಸ್ಲಿಮ್ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು, ಅವರಿಗೆ ಕಿರುಕುಳ ನೀಡಿ, ಹೆದರಿಸಲು ಪ್ರಯತ್ನಗಳು ನಡೆಯುತ್ತಿವೆ. ನನ್ನ ಎಲ್ಲ ವ್ಯವಹಾರಗಳು ಪಾರದರ್ಶಕವಾಗಿವೆ. ಆದುದರಿಂದ, ನಾನು ಯಾವುದಕ್ಕೂ ಹೆದರುವವನಲ್ಲ' ಎಂದು ಶಾಸಕ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಶುಕ್ರವಾರ ನಗರದ ಕಬ್ಬನ್‍ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಶಾ ಖಾದ್ರಿ ಹಾಗೂ ಹಝ್ರತ್ ಮುಹೀಬ್ ಶಾ ಖಾದ್ರಿ ದರ್ಗಾಗೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 'ನಾನು ಮನೆಯನ್ನು ಕಟ್ಟಿಸಿದ್ದೆ ಅಪರಾಧ ಎಂಬಂತೆ ಬಿಂಬಿಸಲಾಗುತ್ತಿದೆ. ಈ.ಡಿ.ಯವರು ಯಾವ ನಿರೀಕ್ಷೆಯಿಂದ ನನ್ನ ಮನೆ ಮೇಲೆ ದಾಳಿ ಮಾಡಿದರೋ ಅವರ ನಿರೀಕ್ಷೆ ಹುಸಿಯಾಯಿತು. ನನ್ನ ಎಲ್ಲ ಆಸ್ತಿ ಬಡವರ ಬಳಿಯಿದೆ. ರಾಜಕೀಯದಲ್ಲಿ ಇರುವವರೆಗೆ ನನ್ನ ನಂಬಿದ ಜನ ತಲೆ ತಗ್ಗಿಸುವಂತಹ ಕೆಲಸವನ್ನು ನಾನು ಮಾಡಲ್ಲ' ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಹಝ್ರತ್ ಹಮೀದ್ ಶಾ ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷ ಜಿ.ಎ.ಬಾವಾ, ಕಾಂಗ್ರೆಸ್ ಮುಖಂಡ ಬಿ.ಕೆ.ಅಲ್ತಾಫ್ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News