ಹರೀಶ್ ಶೆಟ್ಟಿ

Update: 2021-08-20 17:04 GMT

ಮಂಗಳೂರು, ಆ.20: ನಗರದ ಸಿಟಿ ಸೆಂಟರ್ ಮಾಲ್‌ನ ಭದ್ರತಾ ವಿಭಾಗದಲ್ಲಿ ಮ್ಯಾನೇಜರ್ ಆಗಿದ್ದ ಹರೀಶ್ ಶೆಟ್ಟಿ (45) ಗುರುವಾರ ನಿಧನರಾಗಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮೂಲತಃ ಪಡೀಲ್‌ನ ಪ್ರಸ್ತುತ ಬಳ್ಳಾಲ್‌ ಬಾಗ್‌ನಲ್ಲಿ ವಾಸವಾಗಿದ್ದ ಹರೀಶ್ ಶೆಟ್ಟಿ ಗುರುವಾರ ಬೆಳಗ್ಗೆ ಪತ್ನಿ ಹಾಗೂ ಮಕ್ಕಳೊಂದಿಗೆ ಕುಂದಾಪುರಕ್ಕೆ ತೆರಳಿದ್ದರು. ಮಧ್ಯಾಹ್ನ ಹೊಟೇಲೊಂದರಲ್ಲಿ ಊಟ ಮಾಡುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ