ಬೆಂಗಳೂರು: ಕಾಲಿಗೆ ಗುಂಡಿಕ್ಕಿ ರೌಡಿಶೀಟರ್ ನ ಬಂಧನ
ಬೆಂಗಳೂರು, ಆ.21: ಪೊಲೀಸರ ಮೇಲೆ ನಡೆಸಿ ಪರಾರಿಯಾಗಲೆತ್ನಿಸಿದ ರೌಡಿಶೀಟರ್ ಓರ್ವನನ್ನು ಕಾಲಿಗೆ ಗುಂಡಿಕ್ಕಿ ಸಂಜಯ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ರೌಡಿಶೀಟರ್ ಅವಿನಾಶ್(22) ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.
ಅವಿನಾಶ್ ಹಲವು ಪ್ರಕರಗಳ ಆರೋಪಿಯಾಗಿದ್ದು, ಇತ್ತೀಚಿಗಷ್ಟೇ ಮುನಿರಾಜು ಎಂಬವರ ಮೇಲೆ ಹಾಡಗಲೇ ಹಲ್ಲೆ ನಡೆಸಿ ಪರಾರಿಯಾಗಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಈ ನಡುವೆ ಆರೋಪಿ ಅವಿನಾಶ್ ಹೆಬ್ಬಾಳ ಬಳಿಯ ಗುಡ್ಡದಹಳ್ಳಿ ಬಳಿ ಖಚಿತ ಮಾಹಿತಿ ಪಡೆದ ಸಂಜಯನಗರ ಪೊಲೀಸರು ಶನಿವಾರ ಮುಂಜಾನೆ ಆತನನ್ನು ಬಂಧಿಸಲು ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಅವಿನಾಶ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಬಾಲರಾಜ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಗುಂಡೇಟಿನಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿ ಹಾಗೂ ಗಾಯಾಳು ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.