ತ್ರಿಪುರಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಪಿಜುಶ್ ಕಾಂತಿ ಬಿಸ್ವಾಸ್ ರಾಜೀನಾಮೆ

Update: 2021-08-21 10:59 GMT
photo: twitter

ಹೊಸದಿಲ್ಲಿ: ತ್ರಿಪುರಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಪಿಜುಶ್ ಕಾಂತಿ ಬಿಸ್ವಾಸ್ ತಮ್ಮ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ ಐ ಟ್ವಿಟರ್ ನಲ್ಲಿ ತಿಳಿಸಿದೆ.

"ನಾನು ಅಧ್ಯಕ್ಷ  ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ತುಂಬಾ ನೋವು ತಂದಿದೆ. ಪಕ್ಷದ ಸೇವೆ ಮಾಡಲು ನನಗೆ ಅವಕಾಶ ನೀಡಿದ ಸೋನಿಯಾ ಜೀ ಅವರಿಗೆ ನಾನು ಆಭಾರಿಯಾಗಿದ್ದೇನೆ. ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೇನೆ ಹಾಗೂ  ನನ್ನ ವೃತ್ತಿಗೆ ಮರಳಲು ನನಗೆ ಸಂತೋಷವಾಗಿದೆ" ಎಂದು ಅವರು ಹೇಳಿದರು.

ಬಿಸ್ವಾಸ್ ರಾಜೀನಾಮೆಗೆ ಪ್ರತಿಕ್ರಿಯಿಸಿದ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಕಾಂಗ್ರೆಸ್ ಪಕ್ಷವನ್ನು ತೊರೆದು ಕಳೆದ ವಾರ ತೃಣಮೂಲ ಕಾಂಗ್ರೆಸ್‌ಗೆ ಸೇರಿರುವ ಸುಶ್ಮಿತಾ ದೇವ್, "ನಮ್ಮ ಅಧಿಕಾರಾವಧಿಯು ಕಠಿಣವಾಗಿತ್ತು ... ಭವಿಷ್ಯಕ್ಕೆ ಶುಭವಾಗಲಿ ಎಂದು  ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News