×
Ad

ಉಡುಪಿ : ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶತಾಯುಷಿ ಡೋಲು ಕಲಾವಿದ ಗುರುವ ಕೊರಗ ನಿಧನ

Update: 2021-08-22 11:08 IST

ಉಡುಪಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ (105) ಅವರು ರವಿವಾರ ವಯೋ ಸಹಜವಾಗಿ ನಿಧನರಾಗಿದ್ದಾರೆ.

ಡೋಲು ನುಡಿಸುವುದರ ಮೂಲಕ ಜನಪದ ಸಂಸ್ಕೃತಿಯ ಅನನ್ಯತೆಯನ್ನು ಪರಿಚಯಿಸಿರುವ ಶತಾಯುಷಿ ಡೋಲು (ಕಡ್ಡಾಯಿ) ಕಲಾವಿದ ಗುರುವ ಕೊರಗ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ತುಳುನಾಡಿನ ಜಾನಪದಿಯ ಸಂಸ್ಕೃತಿಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಅವರು ಮಾಡಿದ್ದಾರೆ. ಕೊರಗ ಬುಡಕಟ್ಟು ಸಮುದಾಯಕ್ಕೆ ಸೇರಿದ 105 ವರ್ಷ ವಯಸ್ಸಿನ ಗುರುವ ಕೊರಗ ಹಿರಿಯಡ್ಕದ ಗುಡ್ಡೆ ಅಂಗಡಿಯ ಬಲ್ಕೋಡಿ ನಿವಾಸಿಯಾಗಿದ್ದಾರೆ. ಡೋಲು ಕಲಾವಿದ ಹಿರಿಯಡ್ಕದ ತೋಮ ಮತ್ತು ತುಂಬೆ ದಂಪತಿ ಪುತ್ರರಾಗಿರುವ ಇವರು, 12ನೆ ವಯಸ್ಸಿನಿಂದಲೂ ಡೋಲು ಬಾರಿಸುವುದು ಮತ್ತು ಬುಟ್ಟಿ ಹೆಣೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು.

ಶತಾಷಿಯಾದರೂ ಇವರ ಡೋಲು ಭಾರಿಸುವ ಉತ್ಸಾಹ ಕುಂದಿರಲಿಲ್ಲ. ಹಿರಿಯಡ್ಕ, ಕಣಜಾರು ಜಾತ್ರೆ, ಗರಡಿ ಉತ್ಸವ, ಕೋಲ ಹಾಗೂ ಸುತ್ತ ಮುತ್ತಲ ಗ್ರಾಮಗಳಲ್ಲಿ ನಡೆಯುವ ಕಂಬಳಗಳಿಗೆ ಗುರುವರ ಡೋಲು ಬಡಿತ ಮೆರುಗು ತುಂಬುತ್ತಿತ್ತು.

ತುಳುನಾಡಿನ ಡೋಲು ಸಂಸ್ಕೃತಿಯನ್ನು ಉಳಿಸಿಕೊಂಡ ಇವರ ಸಾಧನೆಯನ್ನು ಗುರುತಿಸಿ 2017ನೆ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಗೌರವ ಪ್ರಶಸ್ತಿ ಕೂಡ ಲಭಿಸಿದೆ. ಅಲ್ಲದೆ ಹಲವು ಗೌರವ ಪುರಸ್ಕಾರಕ್ಕೆ ಅವರು ಭಾಜನರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News