ದಲಿತ ಕಾರ್ಮಿಕನಿಗೆ ರಾಸಾಯನಿಕ ಎರಚಿ ಹಲ್ಲೆ: ಖಂಡನೆ

Update: 2021-08-22 15:32 GMT

ಬೈಂದೂರು, ಆ. 22: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ದಲಿತ ಕೃಷಿ ಕೂಲಿಕಾರ ಮುದೂರು ಗ್ರಾಮದ ನಿವಾಸಿ ವೆಂಕಟ್ರಮಣ ಎಂಬವರ ಮೇಲೆ ವಿಷಯುಕ್ತ ರಾಸಾಯನಿಕ ಎರಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನವೀಯ ಕೃತ್ಯವನ್ನು ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ ತೀವ್ರವಾಗಿ ಖಂಡಿಸಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು. ಗಾಯಾಳುವಿಗೆ ಸರಕಾರದ ವತಿಯಿಂದ ಸಂಪೂರ್ಣ ವೈದ್ಯಕೀಯ ವೆಚ್ಚ ಭರಿಸಬೇಕು. ಈ ಬಡ ಕುಟುಂಬದ ಜೀವನ ನಿರ್ವಹಣೆಗೆ 10 ಲಕ್ಷ ರೂ. ಪರಿಹಾರ ಹಣ ನೀಡಬೇಕು. ಇಲ್ಲವಾದರೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News