ಉಡುಪಿ: ಅಂತಾರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಅಭಿಯಾನ

Update: 2021-08-23 13:09 GMT

ಉಡುಪಿ, ಆ.23: ಅಂತಾರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ-2021ರ ಅಭಿಯಾನದ ಅಂಗವಾಗಿ ಉಡುಪಿ ನಗರಸಭೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಸ್ಥಳಗಳಲ್ಲಿ ಗಿಡ ಮೂಲಿಕೆ, ಹಣ್ಣು ಹಂಪಲು ಹಾಗೂ ಇತರ ಗಿಡಗಳನ್ನು ನೆಟ್ಟು ಪೋಷಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಈ ನಿಟ್ಟಿನಲ್ಲಿ ನಿಟ್ಟೂರಿನಲ್ಲಿರುವ ಕೊಳಚೆ ನೀರು ಶುದ್ಧೀಕರಣ ಘಟಕದಲ್ಲಿ ಗಿಡಮೂಲಿಕೆ ಹಾಗೂ ಹಣ್ಣು ಹಂಪಲು ಗಿಡಗಳನ್ನು ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ನೆಟ್ಟು ಅಂತಾರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಅಭಿಯಾನಕ್ಕೆ ಚಾಲನೆ ನೀಡಿ, ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪಾರಂಪರಿಕ ಸ್ಥಳ/ವೃಕ್ಷ, ಪಕ್ಷಿಧಾಮ ಹಾಗೂ ಔಷಧೀಯ ಗುಣ ಹೊಂದಿರುವ ಗಿಡಗಳ್ನು ರಕ್ಷಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ ಜನತಾ ಜೀವವೈವಿಧ್ಯ ನಿರ್ವಹಣಾ ಸಮಿತಿಯ ಸದಸ್ಯ ಗುಜ್ಜಾಡಿ ಪ್ರಭಾಕರ ನಾಯಕ್, ಕೃಷ್ಣರಾವ್ ಕೊಡಂಚ, ಚಂದ ಅಂಚನ್ ಮತ್ತು ನಗರಸಭೆ ಪೌರಾಯುಕ್ತ ಡಾ.ಉದಯ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್‌ರಾಜ್, ಪರಿಸರ ಅಭಿಯಂತರ ಪ್ರಕಾಶ್, ಕಂದಾಯ ಅಧಿಕಾರಿ ಧನಂಜಯ ಡಿ ಬಿ, ಆರೋಗ್ಯ ನಿರೀಕ್ಷಕ ಕರುಣಾಕರ, ಶಶಿರೇಖಾ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News