ಕಾಂಗ್ರೆಸ್‍ನವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಹೇಳಿಕೆ ನೀಡುತ್ತಿದ್ದಾರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Update: 2021-08-24 12:47 GMT

ಚಿಕ್ಕಮಗಳೂರು,ಆ.24: 'ಕಾಂಗ್ರೆಸ್‍ನವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಹೇಳಿಕೆ ನೀಡುತ್ತಿದ್ದಾರೆ' ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಆರೆಸ್ಸೆಸ್ ಮತ್ತು ತಾಲಿಬಾನ್ ಸಂಘಟನೆಗಳು ಒಂದೇ ಎಂದು ಕಾಂಗ್ರೆಸ್ ಮುಖಂಡ ಧ್ರುವನಾರಾಯಣ್ ಹೇಳಿಕೆಗೆ ಪ್ರತಿಕ್ರಿಯಿಸಿದರು. 'ನೆಲೆ ಇಲ್ಲದ ಕಾಂಗ್ರೆಸ್‍ನವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಎಲುಬಿಲ್ಲದ ನಾಲಿಗೆ ಏನು ಬೇಕಾದರೂ ಹೇಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಮನಸ್ಥಿತಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಾಗಿತ್ತು. ಅದಕ್ಕೆ ಅವರು ಕಾಶ್ಮೀರದ ಸಮಸ್ಯೆಯನ್ನು ಜೀವಂತವಾಗಿಟ್ಟಿದ್ದರು. ಈಗ ಕಾಶ್ಮೀರದ ಸಮಸ್ಯೆ ಬಗೆಹರಿದಿದೆ. ಭಯೋತ್ಪಾದಕರ ಹುಟ್ಟಡಗಿದೆ. ಕಾಂಗ್ರೆಸ್‍ನವರು ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

'ದೇಶದ್ರೋಹಿಗಳು ಯಾರು, ದೇಶ ಭಕ್ತರು ಯಾರು ಎಂಬುದು ಜನರಿಗೆ ಗೊತ್ತು, ಜನರೇ ಕಾಂಗ್ರೆಸ್‍ನವರಿಗೆ ಉತ್ತರಿಸುತ್ತಾರೆ' ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News