ಪಿರಿಯಾಪಟ್ಟಣದಲ್ಲಿ ಅಪಘಾತ: ಬಂಟ್ವಾಳದ ಇಬ್ಬರಿಗೆ ಗಾಯ

Update: 2021-08-24 15:10 GMT

ಬಂಟ್ವಾಳ, ಆ.24: ಮೈಸೂರಿನ ಪಿರಿಯಾಪಟ್ಟಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಬಂಟ್ವಾಳ ಕೆಳಗಿನ ಪೇಟೆಯ ಇಬ್ಬರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. 

ಅಪಘಾತದಲ್ಲಿ ಕೆಳಗಿನಪೇಟೆಯ ನಿವಾಸಿ ಶಂಸುದ್ದೀನ್ ಮತ್ತು ಮೆಲ್ಕಾರ್ ಬೋಗೋಡಿ ನಿವಾಸಿ ಫಯಾಝ್ ಎಂಬವರು ಗಾಯಗೊಂಡಿದ್ದಾರೆ. 

ಇನ್ನೋವ ಕಾರಿಗೆ ಸರಕಾರಿ ಬಸ್ಸು ಢಿಕ್ಕಿ ಹೊಡೆದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಆದರೆ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆತರಲಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News