ಮುಂಡಗೋಡ : ಯುವಕನ ಮೇಲೆ ಕರಡಿ ದಾಳಿ

Update: 2021-08-26 08:39 GMT

ಮುಂಡಗೋಡ : ಅಣಬೆ ಕೀಳಲು ಹೋಗಿದ್ದ ಯುವಕನೋರ್ವನ ಮೇಲೆ ಕರಡಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಾಲೂಕಿನ ಕಾತೂರ ಅರಣ್ಯ ಪ್ರದೇಶದಲ್ಲಿ ಗುರುವಾರ ನಡೆದಿದೆ.

ಆಲಳ್ಳಿ ಗ್ರಾಮದ ಧರ್ಮಣ್ಣ ಕಂಡೋಜಿ ಕರಡಿ ದಾಳಿಗೆ ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ಸ್ನೇಹಿತರೊಂದಿಗೆ ಅಣಬೆ ಕೀಳಲು ಹೋದ ಸಂದರ್ಭ ಕರಡಿ ಏಕಾಏಕಿ ದಾಳಿ ನಡೆಸಿದೆ. ಕೈ, ತೋಡೆ, ಬೆನ್ನಿಗೆ ಗಾಯವಾಗಿದ್ದು, ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ನೀಡಲಾಗಿದೆ ಎಂದು ಇಲ್ಲಿನ ಉಪವಲಯ ಅರಣ್ಯಾಧಿಕಾರಿ ನಾಗರಾಜ ಕಲಾಲ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News