ಸತ್ಯಪಾಲ್ ರೈ ಕಡೆಂಜ
Update: 2021-08-26 17:13 GMT
ಕೊಣಾಜೆ: ಹರೇಕಳ ಗ್ರಾಮದ ಕಡೆಂಜ ಮಹಾಬಲ ರೈ ಅವರ ಪುತ್ರ ಸತ್ಯಪಾಲ ರೈ(53) ಅಲ್ಪಕಾಲದ ಅನಾರೋಗ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಅವರು ಪತ್ನಿಯನ್ನು ಅಗಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಮರಳು ಸಾಗಾಟ, ಲಾರಿ ಮಾಲಕರ ಸಂಘದ ಅಧ್ಯಕ್ಷರಾಗಿ, ನೇತ್ರಾವತಿ ಆಂಜನೇಯ ವ್ಯಾಯಾಮ ಶಾಲೆಯ ಗೌರವ ಅಧ್ಯಕ್ಷರಾಗಿ ಹಾಗೂ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.
ಯಕ್ಷಗಾನ ಮೇಳದ ಸಂಚಾಲಕ: ಯಕ್ಷಗಾನ ಕಲೆಯ ಆಸಕ್ತಿಯನ್ನು ಬೆಳೆಸಿಕೊಂಡಿದ್ದ ಸತ್ಯಪಾಲ್ ರೈ ಕಡೆಂಜ ಅವರು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳ ಹಾಗೂ ದೇಂತಡ್ಕ ಯಕ್ಷಗಾನ ಮೇಳದ ಸಂಚಾಲಕರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದರು.