ಚಾಮರಾಜನಗರದಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸಲು ಸಿಎಂ ಜತೆ ಚರ್ಚೆ: ಸಚಿವ ಸೋಮಶೇಖರ್

Update: 2021-08-27 08:38 GMT

ಚಾಮರಾಜನಗರ, ಆ.27: ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವ ಸಂಬಂಧ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸುವುದಾಗಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಸುತ್ತೂರಿ‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮನಗರದಲ್ಲಿ ಕೋವಿಡ್ ಕ್ಷೀಣಿಸಿದೆ. ವಾರಾಂತ್ಯದ ಕರ್ಫ್ಯೂ ಮುಂದುವರಿಸುವ ಆವಶ್ಯಕತೆ ಇಲ್ಲ. ಈ ವಿಷಯವನ್ನು ಈಗಾಗಲೇ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇನೆ.‌ ಇಂದು ಸಂಜೆ ಶನಿವಾರ ಮತ್ತು ರವಿವಾರ ವಾರಾಂತ್ಯದ ಕರ್ಫ್ಯೂ ಮುಂದುವರಿಸಬೇಕೋ ಬೇಡವೋ ಎಂದು ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News