ಸೆಪ್ಟೆಂಬರ್ 25 ರಂದು 'ಭಾರತ್ ಬಂದ್' ಗೆ ಕರೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ
Update: 2021-08-27 14:03 GMT
ಹೊಸದಿಲ್ಲಿ: ಕೇಂದ್ರ ಸರಕಾರದ ಕೃಷಿ ವಿರೋಧಿ ಕಾನೂನುಗಳ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಶುಕ್ರವಾರ ಸೆಪ್ಟೆಂಬರ್ 25 ರಂದು 'ಭಾರತ್ ಬಂದ್' ಗೆ ಕರೆ ನೀಡಿದೆ.
ಈ ಹೆಜ್ಜೆಯು ಕಳೆದ ವರ್ಷ ನವೆಂಬರ್ನಲ್ಲಿ ಆರಂಭವಾದ ರೈತರ ಆಂದೋಲನವನ್ನು ಮತ್ತಷ್ಟು ಬಲಪಡಿಸುವ ಹಾಗೂ ವಿಸ್ತರಿಸುವ ಗುರಿಯಾಗಿದೆ ಎಂದು ಮೋರ್ಚಾ ಹೇಳಿದೆ.
ದಿಲ್ಲಿಯ ಸಿಂಘು ಗಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಸ್ಕೆಎಂನ ಆಶಿಶ್ ಮಿತ್ತಲ್, "ನಾವು ಸೆಪ್ಟೆಂಬರ್ 25 ರಂದು ಭಾರತ್ ಬಂದ್ಗೆ ಕರೆ ನೀಡುತ್ತಿದ್ದೇವೆ. ಕಳೆದ ವರ್ಷ ಇದೇ ದಿನಾಂಕದಂದು ಇದೇ ರೀತಿಯ 'ಬಂದ್' ಆಯೋಜಿಸಿದ್ದೆವು ಹಾಗೂ ಕೊರೋನವೈರಸ್ ಸಾಂಕ್ರಾಮಿಕದ ನಡುವೆ ಕಳೆದ ವರ್ಷ ನಡೆದ ಬಂದ್ ಗಿಂತ ಇದು ಹೆಚ್ಚು ಯಶಸ್ವಿಯಾಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದರು.