ರಾಜ್ಯದ ಕೃಷಿ ವಿಷಯಗಳ ಕುರಿತು ಸಿಎಂ-ಶೋಭಾ ಕರಂದ್ಲಾಜೆ ಚರ್ಚೆ
Update: 2021-08-27 22:48 IST
ಬೆಂಗಳೂರು, ಆ.27: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ರಾಜ್ಯದ ಕೃಷಿ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಕೃಷಿ ಸಚಿವ ಬಿ.ಸಿ.ಪಾಟೀಲ್, ತೋಟಗಾರಿಕೆ ಸಚಿವ ಮುನಿರತ್ನ, ಕೇಂದ್ರ ಸರಕಾರದ ಕೃಷಿ ಇಲಾಖೆ ಜಂಟಿ ಕಾರ್ಯದರ್ಶಿ ಸುಮಿತಾ ಬಿಸ್ವಾಸ್, ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಕೃಷಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜ್ ಕುಮಾರ್ ಖತ್ರಿ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಪಶುಸಂಗೋಪನಾ ಇಲಾಖೆಯ ಕಾರ್ಯದರ್ಶಿ ಪಿ.ಮಣಿವಣ್ಣನ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ವಿ.ಪೊನ್ನುರಾಜ್ ಉಪಸ್ಥಿತರಿದ್ದರು.