ಬೆಳ್ತಂಗಡಿ ತಾ.ಪಂ. ಮಾಜಿ ಉಪಾಧ್ಯಕ್ಷ ಬಾವಿಗೆ ಹಾರಿ ಆತ್ಮಹತ್ಯೆ

Update: 2021-08-28 08:15 GMT

ಬೆಳ್ತಂಗಡಿ : ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂತೋಷ್ ಕುಮಾರ್ ಲಾಯಿಲ ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಶನಿವಾರ ನಡೆದಿದೆ.

ಆಟೋ ಚಾಲಕರಾಗಿದ್ದ ಇವರು ಕಳೆದ ವರ್ಷ ನಡೆದ ಅಪಘಾತದಲ್ಲಿ ಬೆನ್ನು ಮೂಳೆ ಮೂರಿತಕ್ಕೊಳಪಟ್ಟು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದರು ಎಂದು ತಿಳಿದುಬಂದಿದೆ.

ಈ ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಅವರು ಶನಿವಾರ ಬೆಳಗ್ಗೆ ಲಾಯಿಲ ಗ್ರಾಮದ ಆದರ್ಶ ನಗರ ಬಳಿ ಇರುವ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬೆಳ್ತಂಗಡಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News