ರಾಜ್ಯದಲ್ಲಿ ಸೋಮವಾರ 973 ಹೊಸ ಕೊರೋನ ಪ್ರಕರಣ ದೃಢ, 15 ಮಂದಿ ಸಾವು

Update: 2021-08-30 15:00 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಆ.30: ರಾಜ್ಯದಲ್ಲಿ ಸೋಮವಾರ 973 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 15 ಮಂದಿ ಸೋಂಕಿಗೆ ಬಲಿಯಾಗಿದ್ದು, 1,324 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,48,228ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,293ಕ್ಕೆ ತಲುಪಿದೆ.

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 18,392ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

15 ಸೋಂಕಿತರು ಬಲಿ: ಬೆಳಗಾವಿ 3, ಬೆಂಗಳೂರು ನಗರ 3, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 1, ಹಾಸನ 1, ಶಿವಮೊಗ್ಗ 1, ತುಮಕೂರು 1, ಉಡುಪಿ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 973 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 4, ಬೆಳಗಾವಿ 18, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 264, ಚಾಮರಾಜನಗರ 9, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 10, ದಕ್ಷಿಣ ಕನ್ನಡ 193, ದಾವಣಗೆರೆ 5, ಧಾರವಾಡ 6, ಗದಗ 1, ಹಾಸನ 74, ಹಾವೇರಿ 1, ಕಲಬುರಗಿ 1, ಕೊಡಗು 42, ಕೋಲಾರ 38, ಕೊಪ್ಪಳ 2, ಮಂಡ್ಯ 10, ಮೈಸೂರು 73, ರಾಮನಗರ 4, ಶಿವಮೊಗ್ಗ 38, ತುಮಕೂರು 21, ಉಡುಪಿ 98, ಉತ್ತರ ಕನ್ನಡ 39, ಯಾದಗಿರಿ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News