ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ಕರೆತಂದು ಸ್ಥಳ ಮಹಜರು

Update: 2021-08-30 15:47 GMT

ಮೈಸೂರು,ಆ.30: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿರುವ ಆರೋಪಿಗಳನ್ನು ಅತ್ಯಾಚಾರ ನಡೆದ ಸ್ಥಳಕ್ಕೆ ಪೊಲೀಸರು ಕರೆತಂದು ಸ್ಥಳ ಮಹಜರು ನಡೆಸಿದರು.

ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದ ಸ್ಥಳಕ್ಕೆ ಸೋಮವಾರ ಪೊಲೀಸರು ಆರೋಪಿಗಳನ್ನು ಕರೆತಂದು ಮಹಜರು ನಡೆಸಿದರು. ಅತ್ಯಾಚಾರ ಪ್ರಕರಣ ಸಂಬಂಧ ತಮಿಳುನಾಡಿನಲ್ಲಿ ಅಡಗಿ ಕುಳಿತಿದ್ದ ಐವರು  ಆರೋಪಿಗಳನ್ನು ಪೊಲೀಸರು ಬಂಧಿಸಿ ಶನಿವಾರ ಕರೆತಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ವಶಕ್ಕೆ ಪಡೆದಿದ್ದರು.

ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಆರೋಪಿಗಳು ಈ ಹಿಂದೆ ಯಾವ ಕೃತ್ಯದಲ್ಲಿ ಭಾಗಿಯಾಗಿದ್ದರು ಎಂದೂ ವಿಚಾರಣೆ ನಡೆಸುತ್ತಿದ್ದು, ಇಂದು ಅತ್ಯಾಚಾರ ನಡೆದ ಸ್ಥಳಕ್ಕೆ ಕರೆತಂದು ಮಾಹಿತಿ ಸಂಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News