ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಆ.30: ಪ್ರಸಕ್ತ 2021-22ನೇ ಸಾಲಿನ ಬಾಲಕರಿಗಾಗಿ ಹೊಯ್ಸಳ ಮತ್ತು ಬಾಲಕಿಯರಿಗಾಗಿ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಕಾರ್ಯಕ್ಕಾಗಿ ಪ್ರಶಸ್ತಿ ನೀಡಲಾಗುತ್ತದೆ. ಈ ಬಗ್ಗೆ ಆರಕ್ಷಕ ಇಲಾಖೆಯ ಪ್ರಥಮ ವರ್ತಮಾನ ವರದಿ, ಭಾವಚಿತ್ರ, ಜನ್ಮ ದಿನಾಂಕ ದಾಖಲೆ (ತಾಲೂಕುಗಳಲ್ಲಿ ತಹಶೀಲ್ದಾರರು/ನಗರಗಳಲ್ಲಿ ಮಹಾನಗರ ಪಾಲಿಕೆಯಿಂದ ದೃಢೀಕರಿಸಿದ) ಹಾಗೂ ಶೌರ್ಯ ಪ್ರದರ್ಶಿಸಿದ ಬಗೆಗಿನ ಪತ್ರಿಕಾ ವರದಿ ಇನ್ನಿತರ ಪೂರಕ ದಾಖಲೆಗಳನ್ನು ಅರ್ಜಿ ಜೊತೆಗೆ ಲಗತ್ತಿಸಿರಬೇಕು.
ಕನ್ನಡ ಭಾಷೆಯಲ್ಲಿಯೇ ಅರ್ಜಿ ಸಲ್ಲಿಸಬೇಕು. ನಗರದ ಉರ್ವಸ್ಟೋರ್ನ ಜಿಪಂ ಕಟ್ಟಡದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸೆ.15ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.: 0824-2451254ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.