ಬೆಳ್ತಂಗಡಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಎಸ್ಡಿಪಿಐ ಪ್ರತಿಭಟನೆ

Update: 2021-08-31 16:50 GMT

ಬೆಳ್ತಂಗಡಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಬೆಳ್ತಂಗಡಿ ತಾಲೂಕಿನ ವಿವಿದೆಡೆಗಳಲ್ಲಿ ಪ್ರತಿಭಟನೆ ನಡೆಯಿತು.

ಲಾಯಿಲಾ ಜಂಕ್ಷನ್ ನಲ್ಲಿ ನಡೆದ ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಸ್ಡಿಪಿಐ ಲಾಯಿಲಾ ಗ್ರಾಮ ಸಮಿತಿ ಅಧ್ಯಕ್ಷ ರಿಯಾಝ್ ವಹಿಸಿದರು. ಪಕ್ಷದ ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹೈದರ್ ನೀರ್ಸಾಲ್  ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ  ಮಾತನಾಡಿದರು. ಕುವೆಟ್ಟು ಗ್ರಾಮ ಸಮಿತಿ ವತಿಯಿಂದ ಗುರುವಾಯನ ಕೆರೆ ಜಂಕ್ಷನ್ ನಲ್ಲಿ  ಪ್ರತಿಭಟನೆ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಕ್ಷದ ಕುವೆಟ್ಟು ಗ್ರಾಮ  ಸಮಿತಿ ಅಧ್ಯಕ್ಷರಾದ ದಾವೂದು ಜಿಕೆ ವಹಿಸಿದರು. ಪಕ್ಷದ ಬೆಳ್ತಂಗಡಿ ಕ್ಷೇತ್ರ ಸಮಿತಿ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ  ಮಾತನಾಡಿದರು. ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News