ಅಫ್ಘಾನಿಸ್ತಾನದ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯಕ್ಕೆ ಕೇಂದ್ರ ಸಂಭ್ರಮಿಸುವ ಅಗತ್ಯವಿರಲಿಲ್ಲ:ಚಿದಂಬರಂ

Update: 2021-09-01 07:13 GMT

ಹೊಸದಿಲ್ಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಫ್ಘಾನಿಸ್ತಾನದ ಕುರಿತು ನಿರ್ಣಯವನ್ನು ಅಂಗೀಕರಿಸಿದ್ದಕ್ಕೆ ಕೇಂದ್ರ ಸರಕಾರ ತನಗೆ ತಾನೇ  ಅಭಿನಂದಿಸಿಕೊ್ಳ್ಳುತ್ತಿದ್ದು, ಅಭಿನಂದಿಸಿಕೊಳ್ಳಲು ಕಾಲ ಇನ್ನೂ ಪಕ್ವವಾಗಿಲ್ಲ.  ಇದು ಈಗ ಅಗತ್ಯವಿರಲಿಲ್ಲ ಎಂದಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಚೀನಾ, ಪಾಕಿಸ್ತಾನ ಹಾಗೂ  ತಾಲಿಬಾನ್ ನಿಯಂತ್ರಣದಲ್ಲಿರುವ ಅಫ್ಘಾನಿಸ್ತಾನದ ಸಂಭಾವ್ಯ ಮೈತ್ರಿಕೂಟವು ಆತಂಕಕ್ಕೆ ಕಾರಣವಾಗಿದೆ ಎಂದು ಎಚ್ಚರಿಸಿದರು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಆಗಸ್ಟ್ ಅವಧಿಗೆ ಭಾರತ ಅಧ್ಯಕ್ಷೀಯ ಸ್ಥಾನದಲ್ಲಿತ್ತು. ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರಿಗೆ ಆಶ್ರಯ ನೀಡಲು ಅಥವಾ ಇತರ ದೇಶಗಳಿಗೆ ಬೆದರಿಕೆಯೊಡ್ಡಲು ಬಳಸಬಾರದು ಎಂದು ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು  ಕಠಿಣ ನಿರ್ಣಯ ಅಂಗೀಕರಿಸಿತ್ತು. ಈ ಹಿನ್ನೆಲೆಯಲ್ಲಿ ಚಿದಂಬರಂ ಅವರ ಹೇಳಿಕೆಗೆ ಮಹತ್ವ ಬಂದಿದೆ.

"'ನಿರ್ಣಯಕ್ಕೆ ಎರಡು ಅರ್ಥಗಳಿವೆ. ಮೊದಲನೆಯದು ಸಮಸ್ಯೆಯನ್ನು' 'ಪರಿಹರಿಸಲಾಗಿದೆ' ಅಥವಾ 'ಭಾರತದ ತೃಪ್ತಿಗಾಗಿ ಇತ್ಯರ್ಥಪಡಿಸಲಾಗಿದೆ'. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಹಾಗೆ ಆಗಿಲ್ಲ.  ಎರಡನೇಯದು ನಾವು ಕಾಗದದಲ್ಲಿ ನಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದು, ಇನ್ನು ಕೆಲವರು ಆ ಕಾಗದದ ಮೇಲೆ ಸಹಿ ಹಾಕುತ್ತಾರೆ.  ಇದು ನಿನ್ನೆಯ  ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಡೆದಿದೆ’’ ಎಂದು ಮಾಜಿ ಕೇಂದ್ರ ಸಚಿವ ಚಿದಂಬರಂ ಬುಧವಾರ ಟ್ವೀಟಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News