ಚಾಮರಾಜನಗರ : ನಗರ ಸಭೆಯ ಸದಸ್ಯ ಸಮೀವುಲ್ಲಾ ಹೃದಯಾಘಾತದಿಂದ ನಿಧನ

Update: 2021-09-01 10:16 GMT

ಚಾಮರಾಜನಗರ : ಚಾಮರಾಜನಗರ ನಗರ ಸಭೆಯ ಎಸ್ಡಿಪಿಐ ಸದಸ್ಯ ಸಮೀವುಲ್ಲಾ ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ . 

ಸಮೀವುಲ್ಲಾ ಅವರಿಗೆ 45 ವರ್ಷ ವಯಸ್ಸಾಗಿತ್ತು. ಚಾಮರಾಜನಗರ ನಗರ ಸಭೆಗೆ 6 ನೇ ವಾರ್ಡ್ ಗೆ ಎಸ್ಡಿಪಿಐ ಯಿಂದ ಚುನಾಯಿತರಾಗಿದ್ದ ಸಮೀವುಲ್ಲಾ, ಪಕ್ಷದ ಜಿಲ್ಲಾ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದರು . ಹಲವು ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಚಾಮರಾಜನಗರದ ಹಲವು ಮಸೀದಿ, ಮದ್ರಸ ಸಮಿತಿಗಳಲ್ಲಿ ಪದಾಧಿಕಾರಿಯಾಗಿಯೂ, ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದ ಅವರು, ಬಾಬರಿ ಮಸೀದಿಯ ಹೋರಾಟದಲ್ಲಿ ಪಾಲ್ಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಬುಧವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು . ಈ ವೇಳೆ ಅಸ್ವಸ್ಥರಾದ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News