×
Ad

ಸೆ.2: ವಿದ್ಯುತ್ ವ್ಯತ್ಯಯ

Update: 2021-09-01 18:28 IST

ಮಂಗಳೂರು ಸೆ.1: ನಗರದ 220/110/11 ಕೆವಿ ಬಜ್ಪೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕಟೀಲು, ಪೆರಾರ, ಈಶ್ವರಕಟ್ಟೆ, ಕಳವಾರು, ಪೆರ್ಮುದೆ, ಬಜಪೆ ಟೌನ್, ಸುಂಕದಕಟ್ಟೆ, ವಾಟರ್ ಸಪ್ಲೈ ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಸೆ.2ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಕೆಪಿಟಿ ಸಿಎಲ್ ವತಿಯಿಂದ ಪೆರ್ಮುದೆ, ಭಟ್ರಕೆರೆ, ಕಣಿಕಟ್ಟ, ಹುಣ್ಸೆಕಟ್ಟೆ, ತೆಂಕ ಎಕ್ಕಾರು, ಎಕ್ಕಾರು, ಬಜಪೆ, ಕಿನ್ನಿಪದವು, ಈಶ್ವರ ಕಟ್ಟೆ, ಮುರ, ಶಾಸ್ತಾವು, ಕಿನ್ನಿಕಂಬ್ಳ, ಮೂಡುಪೆರಾರ, ಕೊಳಪಿಲ, ಅರಿಕೆಪದವು, ಶಾಲೆಪದವು, ಕೊಂಪದವು, ಕರಿಕುಮೇರು, ಕಾಪಿಕಾಡು, ನೆಲ್ಲಿಗುಡ್ಡೆ, ಕತ್ತಲ್ ಸಾರ್, ಸೌಹಾರ್ದನಗರ, ಸಿದ್ದಾರ್ಥ ನಗರ, ಜರಿನಗರ, ಅಂಬಿಕಾನಗರ, ಸುಂಕದಕಟ್ಟೆ, ಕಳವಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News