ರಾಜ್ಯದಲ್ಲಿ ಬುಧವಾರ 1,159 ಮಂದಿಗೆ ಕೊರೋನ ದೃಢ, 21 ಮಂದಿ ಸಾವು

Update: 2021-09-01 14:43 GMT

ಬೆಂಗಳೂರು, ಸೆ.1: ರಾಜ್ಯದಲ್ಲಿ ಬುಧವಾರ 1,159 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 21 ಜನರು ಸೋಂಕಿಗೆ ಬಲಿಯಾಗಿದ್ದು, 1,112 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,50,604ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,339ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 18,412ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

21 ಸೋಂಕಿತರು ಬಲಿ: ಬೆಂಗಳೂರು ನಗರ 7, ಚಾಮರಾಜನಗರ 1, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 5, ದಾವಣಗೆರೆ 1, ಹಾಸನ 2, ತುಮಕೂರು 1, ಉಡುಪಿ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,159 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 2, ಬಳ್ಳಾರಿ 6, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 359, ಚಾಮರಾಜನಗರ 9, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 48, ಚಿತ್ರದುರ್ಗ 7, ದಕ್ಷಿಣ ಕನ್ನಡ 191, ದಾವಣಗೆರೆ 8, ಧಾರವಾಡ 8, ಗದಗ 4, ಹಾಸನ 81, ಕಲಬುರಗಿ 5, ಕೊಡಗು 95, ಕೋಲಾರ 32, ಕೊಪ್ಪಳ 3, ಮಂಡ್ಯ 20, ಮೈಸೂರು 91, ರಾಮನಗರ 1, ಶಿವಮೊಗ್ಗ 11, ತುಮಕೂರು 34, ಉಡುಪಿ 91, ಉತ್ತರ ಕನ್ನಡ 37, ವಿಜಯಪುರ ಜಿಲ್ಲೆಯಲ್ಲಿ ನಾಲ್ಕು ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 359 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಬುಧವಾರದಂದು 359 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 7 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,38,196 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16000 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,14,637 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News