ಶಿವಮೊಗ್ಗ: ಕುವೆಂಪು ವಿವಿ ಕುಲಪತಿಗೆ ವಿದ್ಯಾರ್ಥಿಗಳಿಂದ ಘೇರಾವ್

Update: 2021-09-01 18:07 GMT

ಶಿವಮೊಗ್ಗ(ಸೆ.01): ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಅವರಿಗೆ ಬುಧವಾರ ಸಂಜೆ ವಿದ್ಯಾರ್ಥಿಗಳು ಘೇರಾವ್ ಮಾಡಿದ ಘಟನೆ ನಡೆದಿದೆ.

ಸಹ್ಯಾದ್ರಿ ಕ್ಯಾಂಪಸ್ ಉಳಿಸಿ ಹೋರಾಟ ವೇದಿಕೆ ವತಿಯಿಂದ ಹಳೇ ವಿದ್ಯಾರ್ಥಿಗಳು, ಪ್ರಸಕ್ತ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಕುಲಪತಿಗಳಿಗೆ ಘೇರಾವ್ ಹಾಕಿದ್ದಾರೆ.

ವಿದ್ಯಾರ್ಥಿಗಳಿಂದ ವಿಸಿಗೆ ಪ್ರಶ್ನೆ: ಸಹ್ಯಾದ್ರಿ ಕಾಲೇಜಿನ ಜಾಗವನ್ನು ಕ್ರೀಡಾ ಚಟುವಟಿಕೆಗೆ ನೀಡಿದ್ದಲ್ಲಿ ಶೈಕ್ಷಣಿಕ ಅಭಿವೃದ್ಧಿಗಾಗಿ ಅವಕಾಶಗಳೇ ಇಲ್ಲವಾಗಲಿದೆ. ಬಹುಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಕಾಲೇಜಿಗೆ ಬರುತ್ತಾರೆ. ಅವರ ಹಿತವನ್ನು ಬಲಿ ಕೊಡುವುದು ಎಷ್ಟು ಸರಿ ಎಂದು ವಿದ್ಯಾರ್ಥಿಗಳು ಕುಲಪತಿಗಳಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ವೀರಭದ್ರಪ್ಪ ಅವರು, ಈ ಕುರಿತು ಸಚಿವರು, ಸಂಸದರೊಂದಿಗೆ ಚರ್ಚಿಸಿ ನಂತರ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News