ಕಾರು ಬೈಕ್ ನಡುವೆ ಮುಖಾಮುಖಿ ಢಿಕ್ಕಿ; ಯುವಕ ಮೃತ್ಯು

Update: 2021-09-02 12:14 GMT

ಹನೂರು: ಮಲೆ ಮಹದೇಶ್ವರ ಬೆಟ್ಟ ತಾಳುಬೆಟ್ಟ ಮಾರ್ಗದ ಹುಲಿಗೂಡಿನ ರಸ್ತೆ ತಿರುವಿನ ಬಳಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಮಲೆ ಮಹದೇಶ್ವರ ಬೆಟ್ಟದ ನಿವಾಸಿ ನಾಗೇಂದ್ರ (25) ಎಂಬಾತನೇ ಮೃತಪಟ್ಟ ಯುವಕ. 

ಈತ ಗುರುವಾರ ಬೆಳಗ್ಗೆ 9ರ ವೇಳೆಯಲ್ಲಿ ಮ.ಬೆಟ್ಟದಿಂದ ಹನೂರಿನ ಕಡೆಗೆ ಬೈಕ್‍ನಲ್ಲಿ ತೆರಳುತ್ತಿದ್ದನು. ಈ ವೇಳೆ ಹುಲಿಗೂಡು ಸಮೀಪ ಎದುರಿಗೆ ಬಂದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ನಾಗೇದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಬಗ್ಗೆ ಸಾರ್ವಜನಿಕರು ತಿಳಿಸಿದ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಮ.ಬೆಟ್ಟದ ಪೋಲಿಸರು ಮಹಜರ್ ನಡೆಸಿ ಮೃತದೇಹವನ್ನು ಮರಣೊತ್ತರ ಪರೀಕ್ಷೆಗೆ ಹನೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಮರಣೊತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. 

ಅಪಘಾತಕ್ಕೀಡಾದ ಕಾರಿನಲ್ಲಿದ್ದವರು ಬೆಂಗಳೂರಿನವರು ಎಂದು ತಿಳಿದು ಬಂದಿದ್ದು, ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ವಾಹನಗಳನ್ನು ವಶಕ್ಕೆ ಪಡೆದಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News