ಕಾಂಗ್ರೆಸ್ ಶಾಸಕಿಯ ಆಪ್ತನಿಗೆ ಪೊಲೀಸ್ ಕಮಿಷನರ್ ಹಲ್ಲೆ ಪ್ರಕರಣ: ಸಿದ್ದರಾಮಯ್ಯ ಖಂಡನೆ
Update: 2021-09-02 13:21 GMT
ಕಲಬುರಗಿ, ಸೆ.2: ಕಾಂಗ್ರೆಸ್ ಶಾಸಕಿ ಖನೀಝ್ ಫಾತಿಮಾ ಅವರ ಆಪ್ತ ಸಹಾಯಕ ಆದಿಲ್ ಸುಲ್ತಾನ್ ರಿಗೆ ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್ ಥಳಿಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಕಮಿಷನರ್ ವಿರುದ್ಧ ಕಾನೂನು ಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ .
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಗುಲ್ಬರ್ಗಾ ಪೊಲೀಸ್ ಆಯುಕ್ತರು ಹಲ್ಲೆ ನಡೆಸಿದ್ದು, ಘಟನೆಯನ್ನು ನಾನು ಖಂಡಿಸುತ್ತೇನೆ. ಆಯುಕ್ತರನ್ನು ಅಮಾನತುಗೊಳಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮತ್ತು ಸಂತ್ರಸ್ತನಿಗೆ ನ್ಯಾಯವನ್ನು ಒದಗಿಸಿಕೊಡಬೇಕೆಂದು' ರಾಜ್ಯದ ಮುಖ್ಯಮಂತ್ರಿಗಳನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.