ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಗೆ ವಾಟರ್ ಚಿಲ್ಲರ್ ಕೊಡುಗೆ

Update: 2021-09-02 13:29 GMT

ಉಡುಪಿ, ಸೆ.2 ಉಡುಪಿಯ ಮಿಷನ್ ಕಂಪೌಂಡಿನ ಚಂದು ಮೈದಾನದಲ್ಲಿ ರುವ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಗೆ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಸುಮಾರು 90,000 ರೂ. ಮೌಲ್ಯದ ಉತ್ತಮ ಗುಣಮಟ್ಟದ ವಾಟರ್ ಚಿಲ್ಲರ್‌ನ್ನು ಕೊಡುಗೆಯಾಗಿ ನೀಡಲಾಯಿತು.

ಬಡಗಬೆಟ್ಟು ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ವಾಟರ್ ಚಿಲ್ಲರ್‌ನ್ನು ಗುರುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಿಎಆರ್‌ನ ಡಿವೈಎಸ್‌ಪಿ ರಾಘವೇಂದ್ರ, ಮಹಿಳಾ ಠಾಣೆ ನಿರೀಕ್ಷಕ ಜಯಂತ್, ಪೊಲೀಸ್ ಸಿಬ್ಬಂದಿಗಳು ಹಾಗೂ ಪೊಲೀಸ್ ತರಬೇತಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News