ಅಫ್ಘಾನಿಸ್ತಾನದಿಂದ ಭಾರತೀಯರ ತೆರವು ಮೊದಲ ಆದ್ಯತೆಯಾಗಿದೆ: ಕೇಂದ್ರ

Update: 2021-09-02 16:27 GMT

ಹೊಸದಿಲ್ಲಿ,ಸೆ.2: ಅಫ್ಘಾನಿಸ್ತಾನವನ್ನು ತೊರೆಯಲು ಬಯಸಿರುವ ತನ್ನ ಪ್ರಜೆಗಳನ್ನು ತೆರವುಗೊಳಿಸುವುದು ತನ್ನ ಮೊದಲ ಆದ್ಯತೆಯಾಗಿದೆ ಎಂದು ಗುರುವಾರ ಸ್ಪಷ್ಟಪಡಿಸಿದ ಭಾರತವು, ಕಾಬೂಲ ವಿಮಾನ ನಿಲ್ದಾಣವು ಸದ್ಯ ಕಾರ್ಯಾಚರಣೆಗಳನ್ನು ನಿಲ್ಲಿಸಿರುವುದರಿಂದ ಈ ನಿಟ್ಟಿನಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ ಎಂದು ತಿಳಿಸಿತು.


‘ಕಾಬೂಲ್ ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರ ಪುನರಾರಂಭಗೊಂಡಾಗ ಭಾರತೀಯರನ್ನು ತೆರವುಗೊಳಿಸುವ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗುತ್ತೇವೆ ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಸುದ್ದಿಗಾರರಿಗೆ ತಿಳಿಸಿದರು.

ಅಮೆರಿಕವು ತನ್ನ ಪಡೆಗಳನ್ನು ವಾಪಸ್ ಕರೆಸಿಕೊಂಡ ಬಳಿಕ ಮಂಗಳವಾರದಿಂದ ಕಾಬೂಲ ವಿಮಾನ ನಿಲ್ದಾಣವು ತಾಲಿಬಾನ್ ನಿಯಂತ್ರಣದಲ್ಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News