×
Ad

ಭಟ್ಕಳ; ತ್ಯಾಜ್ಯವಿಲೇವಾರಿ ಘಟಕ ಸ್ಥಾಪನೆಗೆ ಸ್ಥಳೀಯರ ವಿರೋಧ: ಸಹಾಯಕ ಆಯುಕ್ತರಿಗೆ ಮನವಿ

Update: 2021-09-02 22:22 IST

ಭಟ್ಕಳ: ಮಾವಿನಕುರ್ವೆ ಗ್ರಾ.ಪಂ.ವ್ಯಾಪ್ತಿಯ ಬೆಳ್ನಿ ಡೊಂಗರಪಳ್ಳಿ ಹಾಗೂ ಬಂದರ ರಸ್ತೆ  ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಸ್ಥಳೀಯ ಜನರು ವಿರೋಧಿಸಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಈ ಭಾಗದಲ್ಲಿ ಹಲವು ಮನೆಗಳು, ಪುರಾತನ, ದರ್ಗಾ, ದೇವಸ್ಥಾನ ಇದ್ದು ರೈತರ ಜಮೀನು ಕೂಡಾ ಇರುತ್ತದೆ, ಈ ಜನವಸತಿ ಪ್ರದೇಶದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ಮಾಡಿದ್ದರೆ ಈ ಭಾಗದಲ್ಲಿ ರೋಗ ರುಜಿನಗಳು ಹರಡುವ ಭೀತಿ ಇರುತ್ತದೆ. ಅಲ್ಲದೇ ಈ ಭಾಗದಿಂದ ಕೆಲ  ಭಾಗದಲ್ಲಿ ನೂರಾರು ಹಿಂದೂ ಮುಸ್ಲಿಂ ಮನೆಗಳಿದ್ದು ಮನೆಯ ಕುಡಿಯುವ ನೀರಿನ ಬಾವಿಗೆ ಕಲುಷಿತ ನೀರು ಬಂದು ನಂತರದಲ್ಲಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಬಂದರೆ ಆಶ್ಚರ್ಯವಿಲ್ಲ, ಈ ಭಾಗದಲ್ಲಿ ಮನೆಗಳು ಅಲ್ಲದೇ ಶಾಲೆ, ಪುರಾತನ, ಮಸೀದಿ, ದೇವಸ್ಥಾನ, ದರ್ಗಾ ಇದ್ದು ಕಸ ವಿಲೇವಾರಿ ಘಟಕದಿಂದ ನಮ್ಮ ಪಾವಿತ್ರ್ಯತೆಗೆ ಧಕ್ಕೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. 

ಜನರ ಮಧ್ಯದಲ್ಲಿ ಕಸ ಹಾಕಲು ಪರಿಸರ ಮಾಲಿನ್ಯ ಇಲಾಖೆಯವರು ಕೂಡಾ ಒಪ್ಪತಕ್ಕದ್ದಲ್ಲ, ಈ ರೀತಿಯಾಗಿ ಏನಾದರು ನಮ್ಮ ವಿರೋಧದ ನಡುವೆಯೂ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕೆಲಸ ಮುಂದುವರಿದರೆ ಮುಂದಾಗುವ ಪರಿಣಾಮಕ್ಕೆ ಜಿಲ್ಲಾಡಳಿತ ಹಾಗೂ ಗ್ರಾಮ ಪಂಚಾಯತ್ ಹೊಣೆಯಾಗಬೇಕಾ ಗುತ್ತದೆ. ತ್ಯಾಜ್ಯ ವಿಲೇವಾರಿ ಘಟಕದ ಕೆಲಸ ಮುಂದುವರಿದರೆ ತೀವ್ರ ಹೋರಾಟ ಮಾಡುವುದು ಅನಿವಾರ್ಯವಾಗುವುದು ತಕ್ಷಣ ಕೆಲಸ ನಿಲ್ಲಿಸಬೇಕೆಂದು ಮನವಿ ಪತ್ರದಲ್ಲಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಯೂಸುಫ್ ಬೆಳ್ನಿ, ಫವಾಝ್ ನದ್ವಿ, ಜಲಾಲ್, ಶಾಹಿದ್, ಸಿದ್ಧಾರ್ಥ ನಾಯ್ಕ, ಮಂಜುನಾಥ ನಾಯ್ಕ, ಸಚಿನ್, ಸೈಯದ್ ಉಮರ್, ಫಹದ್ ಮುಂತಾದವರು ಉಪಸ್ಥಿತರಿದ್ದರು.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು: ಮಾವಿನ ಕುರ್ವೆ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಡಂಪಿಂಗ್ ಯಾರ್ಡ್ ನಿರ್ಮಾಣಕ್ಕೆ ಸಂಬಂಧಿಸಿ ದಂತೆ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಗುರುವಾರ ಸಹಾಯಕ ಆಯುಕ್ತೆ ಮಮತಾ ದೇವಿ, ತಹಸಿಲ್ದಾರ್ ರವಿಚಂದ್ರ ಹಾಗೂ ತಾ.ಪಂ ಕಾರ್ಯನಿರ್ವಾಣಾಧಿಕಾರಿ ಪ್ರಭಾಕರ ಚಿಕ್ಕನ ಮನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪಂಚಾಯತ್ ಅಧಿಕಾರಿ ಹಾಗೂ ಅಲ್ಲಿನ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News