ಜಿಲ್ಲಾ, ತಾಲೂಕು ಪಂಚಾಯತ್ ಕ್ಷೇತ್ರಗಳ ಪುನರ್ ವಿಂಗಡಣೆಗೆ ಆಯೋಗ ರಚಿಸಲು ಸಂಪುಟ ಅಸ್ತು: ಸಚಿವ ಮಾಧುಸ್ವಾಮಿ

Update: 2021-09-04 12:08 GMT

ಬೆಂಗಳೂರು, ಸೆ. 4: `ರಾಜ್ಯದಲ್ಲಿನ ಜಿಲ್ಲಾ ಪಂಚಾಯತ್  ಮತ್ತು ತಾಲೂಕು ಪಂಚಾಯತ್  ಕ್ಷೇತ್ರಗಳ ಪುನವಿರ್ಂಗಡಣೆಗೆ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಪ್ರತ್ಯೇಕ ಕ್ಷೇತ್ರ ಪುನವಿರ್ಂಗಡಣಾ ಆಯೋಗ ರಚಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ' ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, `ಪ್ರತ್ಯೇಕ ಆಯೋಗ ರಚನೆಗೆ ಪೂರಕವಾಗಿ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಕಾನೂನಿನ ಪ್ರಕಾರ ಚುನಾವಣಾ ಆಯೋಗವೇ ಕ್ಷೇತ್ರ ಪುನವಿರ್ಂಗಡಣೆ ಮಾಡಲು ಅವಕಾಶವಿಲ್ಲ. ಕಳೆದ ಬಾರಿ ತಪ್ಪಾಗಿ ಆ ರೀತಿ ಪ್ರಕ್ರಿಯೆ ನಡೆಸಲಾಗಿದೆ.

ಇದರಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯತ್  ಕ್ಷೇತ್ರಗಳ ಪುನವಿರ್ಂಗಡಣೆಯಲ್ಲಿ ತಪ್ಪುಗಳಾಗಿವೆ ಎಂದು ಆರೋಪಿಸಿ ಹೈಕೋರ್ಟ್‍ಗೆ 2 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಇಂತಹ ಸಮಸ್ಯೆ ತಪ್ಪಿಸಲು ಪ್ರತ್ಯೇಕ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ. ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಕ್ಷೇತ್ರ ಪುನವಿರ್ಂಗಡಣಾ ಆಯೋಗದಲ್ಲಿ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸದಸ್ಯರಾಗಲಿದ್ದು, ಆಯುಕ್ತರು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ. ಅಗತ್ಯ ಇರುವ ಎಲ್ಲ ಸಂದರ್ಭಗಳಲ್ಲಿ ಸೀಮಿತ ಕಾಲಾವಧಿಗೆ ಆಯೋಗವನ್ನು ನೇಮಿಸಲಾಗುವುದು ಎಂದು ತಿಳಿಸಿದರು.

`ಪ್ರತ್ಯೇಕ ಆಯೋಗ ಸಿದ್ಧಪಡಿಸುವ ಕ್ಷೇತ್ರ ಪುನವಿರ್ಂಗಡಣಾ ವರದಿಗಳಿಗೆ ಎರಡು ಹಂತಗಳಲ್ಲಿ ಸಲಹೆ, ಆಕ್ಷೇಪಣೆ ಸ್ವೀಕರಿಸಿ, ಇತ್ಯರ್ಥಪಡಿಸಲಾಗುವುದು. ಮೊದಲು ಜಿಲ್ಲಾಧಿಕಾರಿ ಹಂತದಲ್ಲಿ ಆಕ್ಷೇಪಣೆ ಸ್ವೀಕರಿಸಲಾಗುವುದು. ಅಂತಿಮವಾಗಿ ಕ್ಷೇತ್ರ ಪುನವಿರ್ಂಗಡಣಾ ಆಯೋಗವೇ ಆಕ್ಷೇಪಣೆ ಸ್ವೀಕರಿಸಿ, ವಿಲೇವಾರಿ ಮಾಡುವ ವ್ಯವಸ್ಥೆ ಬರಲಿದೆ ಎಂದು ಸಚಿವ ಮಾಧುಸ್ವಾಮಿ ಇದೇ ವೇಳೆ ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News