ಸಾರ್ವಜನಿಕ ಅಹವಾಲು ಸಭೆ ಮುಂದೂಡಿಕೆ
Update: 2021-09-04 20:56 IST
ಉಡುಪಿ, ಸೆ.4: ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆಯ ಕರಡು ನಕಾಶೆಯನ್ನು ಸಾರ್ವಜನಿಕರು ಪರಿಶೀಲಿಸಿ, ಅಹವಾಲು ಸ್ವೀಕರಿಸುವ ಸಲುವಾಗಿ ಸೆ.8ರಂದು ಕರೆದಿದ್ದ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ಈ ಸಭೆಯು ಸೆಪ್ಟೆಂಬರ್ 22ರಂದು ಅಪರಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಟಲ್ ಬಿಹಾರಿ ವಾಜಪೇು ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ನಿರ್ದೇಶಕರು (ಪರಿಸರ) ಅವರ ಪ್ರಕಟಣೆ ತಿಳಿಸಿದೆ.