ಕಾಪು ಬಿಜೆಪಿ ಮಹಾಶಕ್ತಿಕೇಂದ್ರಗಳ ಪದಾಧಿಕಾರಿಗಳ ಸಭೆ

Update: 2021-09-05 14:27 GMT

ಕಾಪು : ಮುಂಬರುವ ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ಕಾಪು ಪುರಸಭೆಯ ಚುನಾವಣೆಗಳನ್ನು ಗೆಲ್ಲಲು ಪಕ್ಷ ಸಂಘಟನಾ ತ್ಮಕವಾಗಿ ಗಟ್ಟಿಗೊಳಿಸಬೇಕು ಎಂದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್  ಕರೆ ನೀಡಿದರು.

ಕಾಪು ಬಿಜೆಪಿ ಕಚೇರಿಯಲ್ಲಿ ಮಹಾಶಕ್ತಿ ಕೇಂದ್ರ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಬಿಜೆಪಿ ಪಕ್ಷದಲ್ಲಿ ಇರುವಷ್ಟು ಸಂಘಟನಾತ್ಮಕ ವ್ಯವಸ್ಥೆ ಇತರ ಯಾವುದೇ ಪಕ್ಷದಲ್ಲಿ ಇಲ್ಲ. ಬೂತ್ ಮಟ್ಟದಿಂದ ಹಿಡಿದು ರಾಷ್ಟ್ರೀಯ ಮಟ್ಟದವರೆಗೆ ಅತ್ಯಂತ ಅಚ್ಚುಕಟ್ಟಾದ ವ್ಯವಸ್ಥೆ ಇದೆ ಎಂದರು.

ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ,  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿದರು. ನೂತನವಾಗಿ ಮಂಡಲ ಪ್ರಭಾರಿಗಳಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿ ರವೀಂದ್ರ ಮಡಿವಾಳ ರವರು ಕಾಪು ಬಿಜೆಪಿ ಕಚೇರಿಗೆ ಭೇಟಿ ನೀಡಿದುದರಿಂದ ಅವರನ್ನು ಗೌರವಿಸಲಾಯಿತು.

ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಮಂಡಲ ಕಾರ್ಯದರ್ಶಿಗಳಾದ ಮಾಲಿನಿ ಶೆಟ್ಟಿ, ಲತಾ ಆಚಾರ್ಯ, ರಾಜೇಶ್ ಕುಂದರ್, ಮಂಡಲ ಉಪಾಧ್ಯಕ್ಷರುಗಳಾದ ಚಂದ್ರಶೇಖರ್ ಕೋಟ್ಯನ್, ಸುಧಾಮ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷರುಗಳಾದ, ಸಂದೀಪ್ ರಾವ್, ಶಿವಪ್ರಸಾದ್ ಶೆಟ್ಟಿ, ಸಂದೀಪ್ ಶೆಟ್ಟಿ, ರವಿ ಕೋಟ್ಯನ್, ಜಿಯಾನಂದ ಹೆಗ್ಡೆ, ವಿಶ್ವನಾಥ ಕುರ್ಕಾಲು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News