ರೈತರಿಂದ ಸೆ.13ಕ್ಕೆ ವಿಧಾನಸೌಧ ಮುತ್ತಿಗೆ: ಕೋಡಿಹಳ್ಳಿ ಚಂದ್ರಶೇಖರ್

Update: 2021-09-06 15:52 GMT

ಬೆಂಗಳೂರು, ಸೆ.6: ವಿವಾದಿತ ಕೃಷಿ ಕಾಯ್ದೆಗಳನ್ನು ಜಾರಿಗೆ ತರಬಾರದೆಂದು ಆಗ್ರಹಿಸಿ ಸೆ.13ರಂದು ರೈತರಿಂದ ವಿಧಾನಸೌಧ ಮುತ್ತಿಗೆ ಚಳುವಳಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಕಾಯ್ದೆಯ ಬಗ್ಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಯನ್ನು ತಡೆಹಿಡಿಯುವಂತೆ ಈಗಾಗಲೇ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ, ರಾಜ್ಯ ಸರಕಾರ ಇದನ್ನು ಪಾಲನೆ ಮಾಡಬೇಕು ಎಂದರು.

ಇಡೀ ದೇಶದಲ್ಲಿಯೇ ರೈತರ ಹೆಸರಿನಲ್ಲಿ ಮೋಸ ಮಾಡಿರುವುದು ರಾಜ್ಯ ಸರಕಾರ ಮಾತ್ರ ಎಂದು ವಾಗ್ದಾಳಿ ನಡೆಸಿದ ಅವರು, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಂತೆ ಧೋರಣೆ ಮುಂದುವರೆಸಿದರೆ ನಮ್ಮ ಹೋರಾಟ ಎದುರಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು. 

ಸೆ.27ರಂದು ರಾಷ್ಟ್ರ ವ್ಯಾಪಿ ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿದ್ದು, ಅದರಂತೆ ಆ ದಿನ ನಾವು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News