ರಾಜ್ಯಾದ್ಯಂತ 851 ಕೊರೋನ ಪ್ರಕರಣ ದೃಢ, 15 ಮಂದಿ ಸಾವು

Update: 2021-09-07 15:36 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಸೆ.7: ರಾಜ್ಯದಲ್ಲಿ ಮಂಗಳವಾರ 851 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 15 ಜನರು ಸೋಂಕಿಗೆ ಬಲಿಯಾಗಿದ್ದು, 790 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,56,988ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,441ಕ್ಕೆ ತಲುಪಿದೆ. 
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 17,432ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

15 ಸೋಂಕಿತರು ಬಲಿ: ಬೆಂಗಳೂರು ನಗರ 3, ದಕ್ಷಿಣ ಕನ್ನಡ 4, ಹಾಸನ 1, ಕೊಡಗು 2, ಮೈಸೂರು 2, ಶಿವಮೊಗ್ಗ 2, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 851 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 3, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 248, ಬೀದರ್ 1, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 49, ಚಿತ್ರದುರ್ಗ 4, ದಕ್ಷಿಣ ಕನ್ನಡ 227, ದಾವಣಗೆರೆ 9, ಹಾಸನ 25, ಹಾವೇರಿ 1, ಕಲಬುರಗಿ 3, ಕೊಡಗು 31, ಕೋಲಾರ 10, ಮಂಡ್ಯ 12, ಮೈಸೂರು 53, ರಾಯಚೂರು 2, ರಾಮನಗರ 1, ಶಿವಮೊಗ್ಗ 20, ತುಮಕೂರು 44, ಉಡುಪಿ 74, ಉತ್ತರ ಕನ್ನಡ 8, ಯಾದಗಿರಿ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News