ಚಲಿಸುತ್ತಿದ್ದ ರೈಲಿಗೆ ಢಿಕ್ಕಿ ಹೊಡೆದು ಮೃತ್ಯು

Update: 2021-09-07 15:49 GMT

ಬೈಂದೂರು, ಸೆ.7: ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ಸೆ.6ರಂದು ಮಧ್ಯಾಹ್ನ ಬಿಜೂರು ರೈಲ್ವೆ ನಿಲ್ದಾಣದ ಸಮೀಪದ ರೈಲ್ವೆ ಹಳಿಯಲ್ಲಿ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಗುರುವ ದೇವಾಡಿಗ(45) ಎಂದು ಗುರುತಿಸ ಲಾಗಿದೆ. ಹಳಿಯ ಸಮೀಪ ನಡೆದುಕೊಂಡು ಹೋಗುತ್ತಿದ್ದ ಗುರುವ, ಹಝರತ್ ನಿಜಾಮುದ್ದಿನ್‌ನಿಂದ ಕೇರಳ-ತಿರುವನಂತಪುರ ಹೋಗುತ್ತಿದ್ದ ರಾಜಧಾನಿ ಎಕ್ಸಪ್ರೆಸ್ ರೈಲಿಗೆ ಢಿಕ್ಕಿ ಹೊಡೆದರು. ಇದರಿಂದ ಗಂಭೀರ ವಾಗಿ ಗಾಯಗೊಂಡು ಅವರು ಸ್ಥಳದಲ್ಲಿಯೇ ಮೃತಪಟ್ಟರು.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News