ರಾಜ್ಯಾದ್ಯಂತ ರಸ್ತೆಗಳಲ್ಲಿ ಪ್ರತಿಮೆ ಸ್ಥಾಪನೆಗೆ ನಿರ್ಬಂಧ: ಹೈಕೋರ್ಟ್ ಆದೇಶ

Update: 2021-09-07 16:17 GMT

ಬೆಂಗಳೂರು, ಸೆ.7: ರಾಜ್ಯಾದ್ಯಂತ ರಸ್ತೆಗಳಲ್ಲಿ ಪ್ರತಿಮೆ ಸ್ಥಾಪನೆಗೆ ಅವಕಾಶ ನೀಡದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಆಧರಿಸಿ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

ಮೈಸೂರಿನ ಗನ್ ಹೌಸ್ ಸರ್ಕಲ್‌ನಲ್ಲಿ ಶ್ರೀಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಪ್ರತಿಮೆ ಸ್ಥಾಪನೆಯನ್ನು ಪ್ರಶ್ನಿಸಿ ಕ್ಷತ್ರಿಯ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿದೆ. 

ಮೈಸೂರಿನ ಗನ್ ಹೌಸ್ ಸರ್ಕಲ್‌ನಲ್ಲಿ ಶ್ರೀಶಿವರಾತ್ರಿ ರಾಜೇಂದ್ರ ಶ್ರೀಗಳ ಪ್ರತಿಮೆ ಸ್ಥಾಪಿಸುವ ಮೈಸೂರು ಪಾಲಿಕೆಯ ನಿರ್ಣಯವನ್ನು ರದ್ದುಗೊಳಿಸಿ ನ್ಯಾಯಪೀಠವು ಆದೇಶ ಹೊರಡಿಸಿದೆ. 

ಗನ್ ಹೌಸ್ ಸರ್ಕಲ್ ರಸ್ತೆ ಮಧ್ಯದಲ್ಲಿದೆ. ಸುಪ್ರೀಂ ಕೋರ್ಟ್ ಪ್ರತಿಮೆಗಳ ಸ್ಥಾಪನೆಗೆ ನಿರ್ಬಂಧ ಹೇರಿದೆ. ಜತೆಗೆ ಈ ಕುರಿತು ಯಾವುದೇ ಅನುಮತಿ ನೀಡದಂತೆ ಸರಕಾರಗಳಿಗೆ ಸೂಚಿಸಿದೆ. ಹೀಗಾಗಿ ಸುಪ್ರೀಂ ಕೋರ್ಟ್ ಆದೇಶ ಪಾಲನೆಗೆ ಹೈಕೋರ್ಟ್ ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News