ಶಿವಮೊಗ್ಗ: ಕೆಎಸ್ಸಾರ್ಟಿಸಿ ಸಿಬ್ಬಂದಿ ಆತ್ಮಹತ್ಯೆ

Update: 2021-09-07 16:26 GMT

ಶಿವಮೊಗ್ಗ: ಭದ್ರಾವತಿಯ ಹೊಸಸಿದ್ದಾಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಕೆಎಸ್ಸಾರ್ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೊಸಸಿದ್ದಾಪುರ ನಾಲ್ಕನೇ ಕ್ರಾಸ್ ನಿವಾಸಿ ಎಂ.ಗಂಗಾಧರ್(46) ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ಪತ್ನಿ ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಗೊತ್ತಾಗಿದೆ.

ಗಂಗಾಧರ್ ಅವರು ಈ ಮುಂಚೆ ಬಿಎಂಟಿಸಿಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ನಂತರ ಧರ್ಮಸ್ಥಳದ ಡಿಪೋದಲ್ಲೂ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಶಿವಮೊಗ್ಗ- ಬೆಂಗಳೂರು ಮಾರ್ಗದ ಬಸ್‍ನಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News