ಶಿವಮೊಗ್ಗ: ನಾಯಿಗಳ ಸಾಮೂಹಿಕ ಸಮಾಧಿ; ದೂರು

Update: 2021-09-07 16:37 GMT

ಶಿವಮೊಗ್ಗ: ಭದ್ರಾವತಿ ತಾಲೂಕಿನ ಕಂಬದಾಳು-ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಕಟ್ಟೆ ಜಂಕ್ಷನ್, ರಂಗನಾಥಪುರದಲ್ಲಿ ನಾಯಿಗಳನ್ನು ಜೀವಂತ ಸಮಾಧಿ ಮಾಡಿದ್ದಾರೆನ್ನಲಾದ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

150 ನಾಯಿಗಳನ್ನು ಒಂದೇ ಕಡೆ ಗುಂಡಿ ತೋಡಿ ಮುಚ್ಚಲಾಗಿದ್ದು, ಇದರ ವಿಡಿಯೋ ಕೂಡ ವೈರಲ್ ಆಗಿದೆ. ಆದರೆ, ಪೊಲೀಸರು ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ.

ಪ್ರಾಣಿ ದಯಾ ಸಂಘದಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇದುವರೆಗೆ ಪ್ರಕರಣ ದಾಖಲಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News