×
Ad

ದೇಶವಿರೋಧಿ, ಪ್ರಚೋದನಾತ್ಮಕ ಹೇಳಿಕೆ ನೀಡುವ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ: ಸೆಂಟ್ರಲ್ ಯುನಿವರ್ಸಿಟಿ ಆಫ್ ಕೇರಳ

Update: 2021-09-10 16:34 IST

 ತಿರುವನಂತಪುರಂ: ಸೆಂಟ್ರಲ್ ಯುನಿವರ್ಸಿಟಿ ಆಫ್ ಕೇರಳದ ಕುಲಸಚಿವರು ಆಗಸ್ಟ್ 30ರಂದು ಹೊರಡಿಸಿರುವ ಸುತ್ತೋಲೆಯೊಂದರಲ್ಲಿ "ಸಂಸ್ಥೆಯ ಬೋಧಕರು ಹಾಗೂ ಉದ್ಯೋಗಿಗಳು ದೇಶ-ವಿರೋಧಿ ಎಂದು ತಿಳಿಯಬಹುದಾದ ಹಾಗೂ ದೇಶದ ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ರೀತಿಯ ಪ್ರಚೋದನಾತ್ಮಕ ಭಾಷಣಗಳು/ಹೇಳಿಕೆಗಳನ್ನು ನೀಡಬಾರದು. ಹಾಗೇನಾದರೂ ಮಾಡಿದವರ ವಿರುದ್ಧ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಸಲಾಗಿದೆ.

ವಿವಿಯ ಉಪಕುಲಪತಿಗಳ ಅನುಮತಿಯೊಂದಿಗೆ ಈ ಸುತ್ತೋಲೆ ಹೊರಡಿಸಲಾಗಿದೆ ಎಂದೂ ಅದರಲ್ಲಿ ತಿಳಿಸಲಾಗಿದೆ.

ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ನೀತಿಗಳ ಟೀಕಾಕಾರರಾಗಿರುವವರ ಬಾಯ್ಮುಚ್ಚಿಸುವ ತಂತ್ರಗಾರಿಕೆ ಇದಾಗಿದೆ ಎಂದು ತಮ್ಮ ಹೆಸರು ಹೇಳಲಿಚ್ಛಿಸದ ವಿವಿಯ ಹಲವು ಉಪನ್ಯಾಸಕರು ಹೇಳಿದ್ದಾರೆ.

ಆರೆಸ್ಸೆಸ್ ಅನ್ನು 'ಪ್ರೊಟೊ-ಫ್ಯಾಸಿಸ್ಟ್ ಸಂಘಟನೆ' ಎಂದು ಹೇಳಿದ ಪ್ರೊಫೆಸರ್ ಒಬ್ಬರನ್ನು ಅಮಾನತು ಮಾಡಿದ ಮೂರು ತಿಂಗಳಲ್ಲಿ ಈ ಬೆಳವಣಿಗೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News