ಕಾಂಗ್ರೆಸ್ ಮುಖಂಡನ ಕೊಲೆ ಪ್ರಕರಣ: ಮೂವರ ಬಂಧನ
Update: 2021-09-11 13:14 GMT
ದಾವಣಗೆರೆ, ಸೆ.11: ಕಾಂಗ್ರೆಸ್ ಮುಖಂಡ ಝೈನುಲ್ಲಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧ ಮೂವರು ಆರೋಪಿಗಳನ್ನು ಬಸವಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಅಮ್ಜದ್ ಖಾನ್(44), ಇಸ್ಮಾಯಿಲ್ ಖಾನ್(42) ನೂರ್ ಅಹ್ಮದ್(36) ಬಂಧಿತ ಆರೋಪಿಗಳು ಎಂದು ಪೊಲೀಸರು ಹೇಳಿದ್ದಾರೆ.
ಸೆ.2 ರಂದು ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಅವರನ್ನು ಆರೋಪಿಗಳು ಬಸವಾ ಪಟ್ಟಣದ ಗುಡ್ಡದಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿ, ಹೂತು ಹಾಕಿದ್ದರು ಎನ್ನುವ ಮಾಹಿತಿ ಗೊತ್ತಾಗಿದೆ.
ಮೃತ ಝೈನುಲ್ಲಾ ಖಾನ್ ಬೆಸ್ಕಾಂ ಗುತ್ತಿಗೆದಾರನಾಗಿದ್ದು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿದ್ದ. ಒಂದು ವಾರದ ಹಿಂದೆ ನಾಪತ್ತೆ ಆಗಿದ್ದ, ಈ ಸಂಬಂಧ ದಾಖಲಾದ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು, ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.