ಹೆಬ್ರಿ: ನೂತನ ಪ್ರವಾಸಿ ಬಂಗಲೆಗೆ ಶಿಲಾನ್ಯಾಸ

Update: 2021-09-11 13:39 GMT

ಹೆಬ್ರಿ, ಸೆ.11: ಹೆಬ್ರಿ ಹಳೆ ಪ್ರವಾಸಿ ಮಂದಿರದ ಬಳಿ ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಪ್ರವಾಸಿ ಬಂಗಲೆಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಶನಿವಾರ ಶಿಲಾನ್ಯಾಸ ನೆರವೇರಿಸಿದರು.

ಬಿಜೆಪಿ ಕ್ಷೇತ್ರ ಅಧ್ಯಕ್ಷ ಮಹಾವೀರ ಹೆಗ್ಡೆ, ಕಾರ್ಕಳ ತಹಸೀಲ್ದಾರ್ ಪ್ರಕಾಶ್ ಆರ್.ಮರಬಳ್ಳಿ, ಕಂದಾಯ ನಿರೀಕ್ಷಕ ಹಿತೇಶ್, ಜಿಪಂ ಮಾಜಿ ಸದಸ್ಯೆ ಜ್ಯೋತಿ ಹರೀಶ್, ಹೆಬ್ರಿ ಗ್ರಾಪಂ ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಗಣೇಶ್ ಕುಮಾರ್, ಹೆಬ್ರಿ ತಾಪಂ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ಸುಧಾಕರ ಹೆಗ್ಡೆ. ಎಚ್.ಕೆ.ಸುಧಾಕರ್, ಮುದ್ರಾಡಿ ಗ್ರಾಪಂ ಅಧ್ಯಕ್ಷ ಮಂಜು ನಾಥ್ ಹೆಗ್ಡೆ, ನಾಡ್ಪಾಲು ಗ್ರಾಪಂ ಅಧ್ಯಕ್ಷ ದಿನೇಶ್ ಹೆಗ್ಗಡೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News