ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನ

Update: 2021-09-12 11:28 GMT

ಮುಂಬೈ, ಸೆ.12 : ಜಾಗತಿಕ ಬಂಟರ ಸಂಘವು ಒಂದು ದೊಡ್ದ ದೇವಸ್ಥಾನ ಇದ್ದಂತೆ. ಇಲ್ಲಿ ದಾನಿಗಳೇ ದೇವರು. ಪ್ರಾಯೋಜಕರೇ ಭಕ್ತರು. ಬಂಟ ಬಂಧುಗಳೇ ಆಶೀರ್ವಚಕರು. ಸಹೃದಯಿ ದೊಡ್ಡ ಮನಸ್ಸಿನ ದಾನಿಗಳೇ ಆಸ್ತಿಕರು. ಇವರನ್ನೆಲ್ಲರನ್ನೂ ಒಗ್ಗೂಡಿಸಿ ಮುನ್ನಡೆಯುವ ಉದ್ದೇಶ ಒಕ್ಕೂಟದ್ದು. ಎಲ್ಲರ ಸಹಯೋಗದಿಂದ ಸಮಾಜದ ಜನತೆಯ ಕಣ್ಣೋರೆಸುವ ಕೆಲಸ ಸಾಗುತ್ತಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.

ಕುರ್ಲಾ ಪೂರ್ವದ ಚುನ್ನಾಭಟ್ಟಿಯಲ್ಲಿರುವ ಬಂಟರ ಭವನದ ರಾಧಾಬಾಯಿ ತಿಮ್ಮಪ್ಪಭಂಡಾರಿ ಸಭಾಗೃಹದಲ್ಲಿ ನಡೆದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಂಟ್ಸ್ ಸಂಘ ಮುಂಬೈ ಅಧ್ಯಕ್ಷ ಚಂದ್ರಹಾಸ ಕೆ.ಶೆಟ್ಟಿ ಅಧಿವೇಶನ ಉದ್ಘಾಟಿಸಿದರು.

ಕೈಗಾರಿಕೋದ್ಯಮಿ ತೋನ್ಸೆ ಆನಂದ ಎಂ.ಶೆಟ್ಟಿ, ಬಂಟ್ಸ್ ಮಾತೃ ಸಂಸ್ಥೆಯ ಉಪಾಧ್ಯಕ್ಷ ಹೇಮಂತ್ ಶೆಟ್ಟಿ ಕಾವು, ಬಂಟ್ಸ್ ಸಂಘ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್.ಕೆ ಶೆಟ್ಟಿ, ಬಾಂಬೇ ಬಂಟ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ಮುರಳಿ ಕೆ.ಶೆಟ್ಟಿ, ಜವಾಬ್ ಅಧ್ಯಕ್ಷ ಸಿಎ ಐ.ಆರ್ ಶೆಟ್ಟಿ, ಮುಲುಂಡ್ ಬಂಟ್ಸ್ ಅಧ್ಯಕ್ಷ ವಸಂತ್ ಶೆಟ್ಟಿ ಪಲಿಮಾರ್, ಚಂದ್ರಹಾಸ ಶೆಟ್ಟಿ , ಥಾಣೆ ಬಂಟ್ಸ್ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ರತ್ನಾಕರ್ ಶೆಟ್ಟಿ ಮುಂಡ್ಕೂರು, ಉದ್ಯಮಿಗಳಾದ, ಪ್ರವೀಣ್ ಭೋಜ ಶೆಟ್ಟಿ, ನಗ್ರಿಗುತ್ತು ವಿವೇಕ್ ಶೆಟ್ಟಿ, ರಂಜನಿ ಸುಧಾಕರ್ ಹೆಗ್ಡೆ, ಶಿವರಾಮ ಶೆಟ್ಟಿ ಸೂರತ್, ಸತೀಶ್ ಆರ್.ಶೆಟ್ಟಿ, ದಿನೇಶ್ ಶೆಟ್ಟಿ, ಮಹೇಶ್ ಎಸ್.ಶೆಟ್ಟಿ, ಸದಾಶಿವ ಶೆಟ್ಟಿ ಹೇರಂಬ, ರಘುರಾಮ ಕೆ.ಶೆಟ್ಟಿ ಹೇರಂಬ, ಉಮಾ ಕೃಷ್ಣ ಶೆಟ್ಟಿ , ಜೆ.ವಿ.ಶೆಟ್ಟಿ, ರವಿ ಎಸ್.ಶೆಟ್ಟಿ, ಬಿ.ವಿವೇಕ್ ಶೆಟ್ಟಿ , ಅಶೋಕ್ ಎಸ್.ಶೆಟ್ಟಿ, ದಿನಕರ ಎನ್.ಶೆಟ್ಟಿ, ಹರೀಶ್ ಎಸ್.ಶೆಟ್ಟಿ, ಮಂಜುನಾಥ ಶೆಟ್ಟಿ ಕೊಡ್ಲಾಡಿ, ಹಾಲಾಡಿ ಆದರ್ಶ್ ಎಸ್.ಶೆಟ್ಟಿ, ಗಿರೀಶ್ ಆರ್.ಶೆಟ್ಟಿ ತೆಳ್ಳಾರ್, ಜಗದೀಶ್ ಶೆಟ್ಟಿ, ಸಂಜೀವ ಎನ್, ಜಯ ಎನ್.ಶೆಟ್ಟಿ, ಹರೀಶ್ ಪಾಂಡು ಶೆಟ್ಟಿ, ರವೀಂದ್ರನಾಥ ಎಂ.ಭಂಡಾರಿ, ಮೂಡುಶೆಡ್ಡೆ ವಿಶ್ವನಾಥ ಶೆಟ್ಟಿ, ಕರ್ನೂರು ಶಂಕರ ಕೆ.ಆಳ್ವ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ಸುನೀಲ್ ಕುಮಾರ್ ಶೆಟ್ಟಿ ಕುಂದಾಪುರ, ಲತಾ ಪ್ರಭಾಕರ್ ಶೆಟ್ಟಿ, ರತ್ನಾ ಪಿ.ಶೆಟ್ಟಿ, ಮನೋರಮಾ ಎನ್.ಬಿ ಶೆಟ್ಟಿ, ಚಿತ್ರಾ ಆರ್.ಶೆಟ್ಟಿ, ಸತ್ಯಪ್ರಸಾದ್ ಶೆಟ್ಟಿ, ಕಾರ್ತಿಕ್ ಶೆಟ್ಟಿ ಕಾಸರಗೋಡು, ಸಂತೋಷ್ ಶೆಟ್ಟಿ ಗುರುಪುರ, ಶಾಂತರಾಮ ಕೆ.ಶೆಟ್ಟಿ, ಆರ್. ಉಪೇಂದ್ರ ಶೆಟ್ಟಿ ಬೆಂಗಳೂರು, ವಿಜಯ ಭಂಡಾರಿ, ರಾಜ್‌ಗೋಪಾಲ್ ಶೆಟ್ಟಿ ತೋನ್ಸೆ, ವಿಜಯ ಶೆಟ್ಟಿ, ಪ್ರವೀಣ್ ಶೆಟ್ಟಿ ಪುತ್ತೂರು, ಆನಂದ ಶೆಟ್ಟಿ, ಸಂತೋಷ್ ಶೆಟ್ಟಿ, ದೇವಪ್ಪಶೇಖರ್ ಸಾಲೆತ್ತೂರು, ಮನೋಹರ ಶೆಟ್ಟಿ ತೋನ್ಸೆ, ಸಂತೋಷ್ ಕುಮಾರ್ ಹೆಗ್ಡೆ ಮುಲ್ಕಿ, ಶಶಿಧರ್ ಶೆಟ್ಟಿ, ಜಗದೀಶ್ ಶೆಟ್ಟಿ ಬೈಂದೂರು, ಒಕ್ಕೂಟದ ಪ್ರದಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ್‌ದಾಸ್ ಶೆಟ್ಟಿ ಉಪಸ್ಥಿತರಿದ್ದರು.

ಬಂಟರ ಸಂಘ ಮುಂಬೈ ಇದರ ಮಾಜಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಮತ್ತು ಮಾಲಿನಿ ಪದ್ಮನಾಭ್, ಎಫ್‌ಡಬ್ಲು ಬಿಎ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಶ್ವೇತಾ ಜಯಕರ್ ದಂಪತಿಗಳನ್ನು ಸನ್ಮಾನಿಸಲಾಯಿತು. ಪಟ್ಟ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಮತ್ತು ಚಿತ್ರಾ ಜೆ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ಅಶೋಕ್ ಪಕ್ಕಳ ಮತ್ತು ಕರ್ನೂರು ಮೋಹನ್ ರೈ ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಜೊತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News