ಬಂಟ್ವಾಳ: ದ್ವಿಚಕ್ರ ವಾಹನ ಹರಿದು ರಸ್ತೆಯ ಮಧ್ಯೆ ಮಲಗಿದ್ದ ವ್ಯಕ್ತಿ ಮೃತ್ಯು

Update: 2021-09-14 10:12 GMT

ಬಂಟ್ವಾಳ, ಸೆ.14: ರಾತ್ರಿ ವೇಳೆ ರಸ್ತೆಯ ಮಧ್ಯೆ ಮಲಗಿದ ಕೆಲವೇ ಹೊತ್ತಿನಲ್ಲಿ  ವ್ಯಕ್ತಿಯೋರ್ವನ ಮೇಲೆ ದ್ವಿಚಕ್ರ ವಾಹನ ಹರಿದು ಅವರು ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿ‌ಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವೈರಲ್ ಆಗಿದೆ.

ಸಜೀಪ ಮುನ್ನೂರು ನಿವಾಸಿ ಕೃಷ್ಣ ಮೂರ್ತಿ ಹೇರಳ (50)ಮೃತರು ಎಂದು ಗುರುತಿಸಲಾಗಿದೆ.

ಮೆಲ್ಕಾರ್ ಸಮೀಪದ ಪೆಟ್ರೋಲ್ ಪಂಪ್ ಸಮೀಪ ವ್ಯಕ್ತಿಯೋರ್ವರು ನಡೆದುಕೊಂಡು ಬಂದು ಅ ಬಳಿಕ ರಸ್ತೆಯಲ್ಲಿ ಮಲಗುವ ದೃಶ್ಯ ಹಾಗೂ  ಕೆಲವೇ ಹೊತ್ತಿನಲ್ಲಿ ದ್ವಿಚಕ್ರ ವಾಹನವೊಂದು ಮಲಗಿದ್ದ ವ್ಯಕ್ತಿಯ ಮೇಲೆ ಹರಿದು ಸವಾರ ಕೂಡ ರಸ್ತೆಗೆ ಎಸೆಯಲ್ಪಡುವ ದೃಶ್ಯ ಸೆರೆಯಾಗಿದೆ. 

ಅಪಘಾತ ನಡೆಡ ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕೃಷ್ಣ ಮೂರ್ತಿ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರ ನಿಗೆ ಗಾಯವಾಗಿದ್ದು ಆತ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.

ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News