ಬಂಟ್ವಾಳ; ಯುವಕ ನಾಪತ್ತೆ: ದೂರು

Update: 2021-09-15 14:50 GMT

ಬಂಟ್ವಾಳ, ಸೆ.15: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಅಬ್ದುಲ್ ಬಶೀರ್ ಎಂಬವರ ಪುತ್ರ ಹಿದಾಯತುಲ್ಲಾ(30 ) ಕಾಣೆಯಾದ ಯುವಕ. 

ಹಿದಾಯತುಲ್ಲಾ ಪುತ್ತೂರಿನ ರಾಜಧಾನಿ ಚಿನ್ನದ ಮಳಿಗೆಯಲ್ಲಿ ಕೆಲಸ ಮಾಡಿಕೊಂಡಿದ್ದು ಸೆ.13ರಂದು ಸಜಿಪ ಮುನ್ನೂರು ಗ್ರಾಮದ ನಂದಾವರದ ತನ್ನ ಮನೆಯಿಂದ ಕೆಲಸಕ್ಕೆಂದು ಹೊರಟಿದ್ದು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ. 

ಸೆ.13ರಂದು ರಾತ್ರಿ 8 ಗಂಟೆಯ ಬಳಿಕ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಈ ಬಗ್ಗೆ ಪುತ್ತೂರಿನ ಜ್ಯುವೆಲ್ಲರಿಯೊಂದರಲ್ಲಿ ವಿಚಾರಿಸಿದ ಸಂದರ್ಭದಲ್ಲಿ, ಸುಮಾರು ಜನರು ಬಂದು ಹಿದಾಯತುಲ್ಲಾ ಹಲವರಿಂದ ಹಣ ಪಡೆದು ವಾಪಸು ನೀಡದಿರುವ ವಿಚಾರ ತಿಳಿದು ಬಂದಿದೆ. ಯಾರೊಂದಿಗೆ ಎಷ್ಟು ಹಣದ ವ್ಯವಹಾರ ಮಾಡಿದ್ದಾನೆ ಎಂಬ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಹಿದಾಯತುಲ್ಲಾ ಅವರ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮಗನನ್ನು ಪತ್ತೆ ಮಾಡಿಕೊಡುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News