ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಆಗ್ರಹಿಸಿ ಪ್ರತಿಭಟನೆ

Update: 2021-09-15 15:20 GMT

ಕುಂದಾಪುರ : ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸು ವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬುಧವಾರ ಕುಂದಾಪುರ ಮಿನಿ ವಿಧಾನ ಸೌದದ ಮುಂದೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಬಿವಿಪಿ ಉಡುಪಿ ಜಿಲ್ಲಾ ಸಂಚಾಲಕ ಅಶೀಶ್ ಶೆಟ್ಟಿ, ನಮ್ಮ ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ಮನುಷ್ಯತ್ವವನ್ನು ಮೀರಿದವುಗಳಾಗಿವೆ. ಪ್ರಸ್ತುತ ಕಾಲಘಟ್ಟದಲ್ಲಿ ಎಳೆ ವಯಸ್ಸಿನ ಮಕ್ಕಳಿಂದ ಹಿಡಿದು ಇಳಿ ವಯಸ್ಸಿನ ಮಹಿಳೆಯವರೆಗೂ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಇದಕ್ಕೆ ಕಾರಣ ನಮ್ಮ ದೇಶದಲ್ಲಿ ಹದೆಗೆಟ್ಟಿರುವ ಕಾನೂನು. ದೇಶದಲ್ಲಿ ಅತ್ಯಾಚಾರ ತಡೆಯಲು ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಸಹ ಕಾರ್ಯ ದರ್ಶಿ ಮಣಿಕಂಠ ಕಳಸ, ಮುಖಂಡರಾದ ನಿರಿಕ್ಷೀತ, ಪ್ರಸನ್ನ, ಪ್ರಜ್ವಲ್, ಆಶಿಶ್ ಬೋಳ, ವಿಜೇತ್, ಯಶಸ್ವಿನಿ ಬೀಜಾಡಿ, ದೀಪಕ್, ರಶ್ಮಿತಾ, ರಾಹುಲ್, ರಶ್ಮಿತಾ, ಹೃತಿಕ್, ಪಲ್ಲವಿ, ಸಂಜಯ್, ಮೇಘ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News