ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಸಿಎಫ್‌ಐ ಪ್ರತಿಭಟನೆ

Update: 2021-09-15 16:49 GMT

ಮಂಗಳೂರು, ಸೆ.15: ಹೊಸ ರಾಷ್ಟ್ತ್ರೀಯ ಶಿಕ್ಷಣ ನೀತಿ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಹಾಗೂ ಪ್ರಕರಣವನ್ನ ಹಿಂಪಡೆಯುವಂತೆ ಆಗ್ರಹಿಸಿ ಸಿಎಫ್‌ಐ ಕಾರ್ಯಕರ್ತರು ಬುಧವಾರ ದ.ಕ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಿದರು.

ನಗರದ ಕ್ಲಾಕ್‌ ಟವರ್ ಬಳಿ ಪ್ರತಿಭಟನೆ ನಡೆದ ಪ್ರತಿಭಟನೆಯಲ್ಲಿ ಸಿಎಫ್‌ಐ ಮಂಗಳೂರು ನಗರದ ಅಧ್ಯಕ್ಷ ಇನಾಯತ್ ಅಲಿ ಮಾತನಾಡಿ ಲಾಠಿ ಏಟಿನ ಮೂಲಕ ವಿದ್ಯಾರ್ಥಿ ಹೋರಾಟವನ್ನು ಹತ್ತಿಕ್ಕುವ ಫ್ಯಾಶಿಸ್ಟ್ ಸರಕಾರದ ಪ್ರಯತ್ನವು ಮೂರ್ಖತನವಾಗಿದೆ. ಎನ್‌ಇಪಿ ವಿರುದ್ಧವಾಗಿ ವಿದ್ಯಾರ್ಥಿಗಳ ಹೋರಾಟವು ಇನ್ನಷ್ಟು ಶಕ್ತಗೊಳ್ಳಲಿದೆ ಎಂದು ಹೇಳಿದರು.

ಮಂಗಳೂರು ಗ್ರಾಮಾಂತರ,ಮಂಗಳೂರು ನಗರ, ಬಂಟ್ವಾಳ ತಾಲೂಕು ಹಾಗೂ ವಿಟ್ಲದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಂಗಳೂರು ಸಿಎಫ್‌ಐ ಜಿಲ್ಲಾ ನಾಯಕಿ ಆಫ್ರಾ, ಮಂಗಳೂರು ನಗರ ಕಾರ್ಯದರ್ಶಿ ಮುನೀರ್ ಬಜಾಲ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಶರ್ಫುಧ್ಧೀನ್ ಬಜಪೆ , ಕಾರ್ಯದರ್ಶಿ ಅಶ್ರಫ್ ಪೊರ್ಕೋಡಿ, ಬಂಟ್ವಾಳ ಅಧ್ಯಕ್ಷ ಅಶ್ಫಾಕ್, ಕಾರ್ಯದರ್ಶಿ ಐಮಾನ್ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News