'ವೆಂಟಿಲೇಟರ್ ಕೊರತೆ ನೀಗಿಸಲು ಇನ್ನೆಷ್ಟು ದಿನ ಬೇಕು?': ಸಚಿವ ಸುಧಾಕರ್ ಗೆ ಕಾಂಗ್ರೆಸ್ ಪ್ರಶ್ನೆ

Update: 2021-09-16 07:08 GMT

ಬೆಂಗಳೂರು: 'ವೆಂಟಿಲೇಟರ್ ಕೊರತೆ ನೀಗಿಸಲು ಇನ್ನೆಷ್ಟು ದಿನ ಬೇಕು?' ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಅವರಿಗೆ ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ. 

'ರಾಜ್ಯದ ವೈದ್ಯಕೀಯ ಕ್ಷೇತ್ರದ ದುರಾವಸ್ಥೆಯನ್ನ ಬಿಜೆಪಿ ಶಾಸಕರೇ ಆರೋಗ್ಯ ಸಚಿವರಿಗೆ ತರಾಟೆ ತೆಗೆದುಕೊಳ್ಳುವ ಮೂಲಕ ತೆರೆದಿಟ್ಟಿದ್ದಾರೆ' ಎಂದು ವಾಗ್ದಾಳಿ ನಡೆಸಿದೆ. 

'ಸುಧಾಕರ್ ಅವರೇ, ಕರೋನ ತಗ್ಗಿದ ಸಮಯದಲ್ಲಿಯೇ ವೆಂಟಿಲೇಟರ್ ಕೊರತೆ ಇದೆ ಎಂದರೆ ಕರೋನ ಸಮಯದಲ್ಲಿನ ಕೊರತೆಯಿಂದಾದ ಸಾವು, ನೋವು ಎಷ್ಟಿರಬಹುದು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News