ಮುಕ್ಕಚ್ಚೇರಿ: ಡಿವೈಎಫ್ಐ ನೂತನ ಘಟಕ ರಚನೆ

Update: 2021-09-16 07:44 GMT

ಉಳ್ಳಾಲ, ಸೆ.16: ತುಳುನಾಡಿನ ಅಭಿವೃದ್ಧಿಯಲ್ಲಿ ತುಳುನಾಡಿನ ಯುವಜನರಿಗೆ ದೊಡ್ಡ ಪಾಲು, ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಅದ್ಯತೆ ನೀಡಿ ಎಂಬ ಘೋಷಣೆಯಲ್ಲಿ ಮುಕ್ಕಚ್ಚೇರಿಯಲ್ಲಿ ಡಿವೈಎಫ್ಐ ಘಟಕ ಸಮಾವೇಶ ನಡೆಯಿತು.

ಸಮಾವೇಶದ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಕೆಲವು ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಯುವಕರಿಗೆ ಭಾವನಾತ್ಮಕ ವಿಚಾರಗಳನ್ನು ತಲೆಗೆ ತುಂಬಿಸಿ ದಾರಿ ತಪ್ಪಿಸುತ್ತಿದ್ದಾರೆ. ಯುವ ಸಮುದಾಯ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗರ ಅದರ್ಶವನ್ನು ಮೈಗೂಡಿಸಿ ಜನರ ಬದುಕಿನ ಬಗ್ಗೆ ಮಾತನಾಡಬೇಕು, ಶಿಕ್ಷಣ, ಆರೋಗ್ಯ, ಉದ್ಯೋಗದ ಬಗ್ಗೆ ತಲೆಕೆಡಿಸಿಕೊಳ್ಳಬೇಕು, ಡಿವೈಎಫ್ಐ ನಡೆಸುವ ಉದ್ಯೋಗದ ಹಕ್ಕಿನ ಹೋರಾಟಕ್ಕೆ ಎಲ್ಲರೂ ಕೈ ಜೋಡಿಸ ಬೇಕೆಂದು ಕರೆ ನೀಡಿದರು.

ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷ ಡಾ.ಜೀವನ್ ರಾಜ್ ಕುತ್ತಾರ್, ಜೊತೆ ಕಾರ್ಯದರ್ಶಿ ರಝಾಕ್ ಮೋಂಟೆಪದವು ಮಾತನಾಡಿದರು. 
ಡಿವೈಎಫ್ಐ ಉಳ್ಳಾಲ ವಲಯ ಅಧ್ಯಕ್ಷ ರಫೀಕ್ ಹರೇಕಳ, ಕಾರ್ಯದರ್ಶಿ ಸುನೀಲ್ ತೇವುಲ, ವಲಯ ಮುಖಂಡರಾದ ಅಡ್ವಕೇಟ್ ನಿತಿನ್ ಕುತ್ತಾರ್, ರಝಾಕ್ ಮುಡಿಪು, ಅಶ್ರಫ್ ಹರೇಕಳ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮುಕ್ಕಚ್ಚೇರಿ ನೂತನ ಘಟಕವನ್ನು ರಚಿಸಲಾಯಿತು. ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ನೂತನ ಸಮಿತಿಗೆ ಡಿವೈಎಫ್ಐ ಶ್ವೇತಾ ಪತಾಕೆ ಕೊಟ್ಟು ಯುವಕರನ್ನು ಸಂಘಟನೆಗೆ ಬರಮಾಡಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News