ಸರಣಿ ಅಪಘಾತ: ತಂದೆ, ಮಗಳು ಸೇರಿ ಮೂವರು ಮೃತ್ಯು; ನಾಲ್ವರು ಗಂಭೀರ

Update: 2021-09-16 13:23 GMT

ಕೋಲಾರ :  ಕೆಎಸ್‌ಆರ್‌ಟಿಸಿ ಬಸ್, ಟಾಟಾ ಏಸ್ ವಾಹನ ಹಾಗೂ ದ್ವಚಕ್ರ ವಾಹನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ತಂದೆ ಮಗಳು ಸೇರಿ ಮೂವರು ಮೃತಪಟ್ಟಿದ್ದು, ನಾಲ್ಕು ಮಂದಿಗೆ ಗಂಭೀರ ಗಾಯವಾಗಿದೆ. ತಾಲೂಕಿನ ಚಿಂತಾಮಣಿ ರಸ್ತೆಯಲ್ಲಿರುವ ಶೆಟ್ಟಿ ಮಾದಮಂಗಳ ಗೇಟ್ ಬಳಿ ಘಟನೆ ನಡೆದಿದ್ದು, ಬೈಕ್‌ನಲ್ಲಿ ಹೋಗುತ್ತಿದ್ದ ತಂದೆ ಹಾಗೂ 6 ವರ್ಷದ ಮಗಳು ಜೀವ ಕಳೆದುಕೊಂಡಿದ್ದಾರೆ.

ಮೃತರನ್ನು ಕೋಲಾರ ಹೊರವಲಯದ ಕೋಗೊಲುಹಳ್ಳಿ ನಿವಾಸಿಗಳಾದ ರಾಜು (46), ಮಗಳು ಬಿಂದು(7) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಸೇರಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಕೋಲಾರದ ಎಸ್.ಎನ್.ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಪ್ತಿಯಲ್ಲಿ ಪ್ರಕರಣ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News