ಸ್ವಯಂ ನಿವೃತ್ತಿಗೆ ಎಡಿಜಿಪಿ ಭಾಸ್ಕರ್ ರಾವ್ ಒಲವು

Update: 2021-09-16 13:30 GMT
 ಭಾಸ್ಕರ್ ರಾವ್

ಬೆಂಗಳೂರು, ಸೆ.15: ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿರುವುದಾಗಿ ವರದಿಯಾಗಿದೆ.

ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಾನೂ ಸ್ವಯಂನಿವೃತ್ತಿ ಪಡೆಯುತ್ತಿದ್ದೇನೆ. ಈ ಸಂಬಂಧ ನನ್ನ ಕೋರಿಕೆಯನ್ನು ಪರಿಗಣಿಸಬೇಕು ಎಂದು ಕೋರಿರುವ ಪತ್ರವನ್ನು ರಾಜ್ಯ ಸರಕಾರಕ್ಕೆ ನೀಡಿರುವುದಾಗಿ ಹೇಳಲಾಗುತ್ತಿದೆ.

ಸ್ವಯಂ ನಿವೃತ್ತಿ ಸಿಗುತ್ತಿದ್ದಂತೆ ಭಾಸ್ಕರ್‍ರಾವ್ ಅವರು ರಾಜಕೀಯ ಪ್ರವೇಶಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಮಾತುಗಳೂ ಕೇಳಿಬರುತ್ತಿವೆ. 

ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ. ಪಡೆದಿರುವ ಭಾಸ್ಕರ್‍ರಾವ್ ಅವರು, 1990ನೆ ಐಪಿಎಸ್ ಬ್ಯಾಚ್ ಅಧಿಕಾರಿ ಆಗಿ ಸೇವೆ ಆರಂಭಿಸಿದ್ದರು. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಸದ್ಯ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News